<p><strong>ಹುಕ್ಕೇರಿ</strong>: ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶಾಸನಬದ್ದ ಪ್ರಾವಧಾನ ವರ್ಗಾವಣೆ ಮಾಡಿದ ನಂತರವೂ ₹2.50 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಪವನ್ ರಮೇಶ ಕತ್ತಿ ಹೇಳಿದರು.</p>.<p>ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಬ್ಯಾಂಕ್ ಪ್ರಸ್ತುತ ₹38.70 ಕೋಟಿ ಸ್ವಂತ ಬಂಡವಾಳ, ₹488.09 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ₹435 .66 ಕೋಟಿ ಠೇವು ಸಂಗ್ರಹಿಸಿ ₹233.99 ಕೋಟಿ ಸಾಲ ವಿತರಿಸಲಾಗಿದೆ. ಶೇ 99.82 ರಷ್ಟು ಸಾಲ ವಸೂಲಾತಿ ಮಾಡಿದ್ದು, ಒಟ್ಟು ₹6.77 ಕೋಟಿ ಲಾಭ ಗಳಿಸಿದೆ ಎಂದರು.</p>.<p>ಬೆಲ್ಲದ-ಬಾಗೇವಾಡಿಯಲ್ಲಿ ಪ್ರಧಾನ ಆಡಳಿತ ಕಚೇರಿ ಸಹಿತ 27 ಶಾಖೆಗಳೊಂದಿಗೆ ಬ್ಯಾಂಕ್ ಸಂಪೂರ್ಣ ಗಣಕೀಕೃತಗೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸೇಪ್ ಲಾಕರ್, ಇ-ಸ್ಟಾಂಪಿಂಗ್, ನೆಫ್ಟ್ ಮತ್ತು ಆರ್.ಟಿ.ಜಿ.ಎಸ್., ಎ.ಟಿ.ಎಂ, ಐ.ಎಂ.ಪಿ.ಎಸ್, ಮೊಬೈಲ್ ಬ್ಯಾಂಕಿಂಗ್ ಸೇವೆಗಳೊಂದಿಗೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.</p>.<p>ಸಿಬ್ಬಂದಿಯ ಶ್ರಮಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೇ 25 ಎಕ್ಸ್ಗ್ರೇಷಿಯಾ (ಬಹುಮಾನ) ಕೊಡುತ್ತಿದ್ದು, ಸಿಬ್ಬಂದಿಗೆ ಆರೋಗ್ಯ ಮತ್ತು ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಆರ್ಥಿಕ ಸಲಹೆಗಾರ ಎಂ.ಕೆ.ಅಮ್ಮಣಗಿ, ಪ್ರಧಾನ ವ್ಯವಸ್ಥಾಪಕ ಸುನಿಲ್ ಬೆಲ್ಲದ, ಬ್ಯಾಂಕಿನ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶಾಸನಬದ್ದ ಪ್ರಾವಧಾನ ವರ್ಗಾವಣೆ ಮಾಡಿದ ನಂತರವೂ ₹2.50 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಪವನ್ ರಮೇಶ ಕತ್ತಿ ಹೇಳಿದರು.</p>.<p>ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಬ್ಯಾಂಕ್ ಪ್ರಸ್ತುತ ₹38.70 ಕೋಟಿ ಸ್ವಂತ ಬಂಡವಾಳ, ₹488.09 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ₹435 .66 ಕೋಟಿ ಠೇವು ಸಂಗ್ರಹಿಸಿ ₹233.99 ಕೋಟಿ ಸಾಲ ವಿತರಿಸಲಾಗಿದೆ. ಶೇ 99.82 ರಷ್ಟು ಸಾಲ ವಸೂಲಾತಿ ಮಾಡಿದ್ದು, ಒಟ್ಟು ₹6.77 ಕೋಟಿ ಲಾಭ ಗಳಿಸಿದೆ ಎಂದರು.</p>.<p>ಬೆಲ್ಲದ-ಬಾಗೇವಾಡಿಯಲ್ಲಿ ಪ್ರಧಾನ ಆಡಳಿತ ಕಚೇರಿ ಸಹಿತ 27 ಶಾಖೆಗಳೊಂದಿಗೆ ಬ್ಯಾಂಕ್ ಸಂಪೂರ್ಣ ಗಣಕೀಕೃತಗೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸೇಪ್ ಲಾಕರ್, ಇ-ಸ್ಟಾಂಪಿಂಗ್, ನೆಫ್ಟ್ ಮತ್ತು ಆರ್.ಟಿ.ಜಿ.ಎಸ್., ಎ.ಟಿ.ಎಂ, ಐ.ಎಂ.ಪಿ.ಎಸ್, ಮೊಬೈಲ್ ಬ್ಯಾಂಕಿಂಗ್ ಸೇವೆಗಳೊಂದಿಗೆ ಗ್ರಾಹಕರಿಗೆ ತ್ವರಿತಗತಿಯಲ್ಲಿ ಸೇವೆ ಸಲ್ಲಿಸುತ್ತಿದೆ ಎಂದರು.</p>.<p>ಸಿಬ್ಬಂದಿಯ ಶ್ರಮಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೇ 25 ಎಕ್ಸ್ಗ್ರೇಷಿಯಾ (ಬಹುಮಾನ) ಕೊಡುತ್ತಿದ್ದು, ಸಿಬ್ಬಂದಿಗೆ ಆರೋಗ್ಯ ಮತ್ತು ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಆರ್ಥಿಕ ಸಲಹೆಗಾರ ಎಂ.ಕೆ.ಅಮ್ಮಣಗಿ, ಪ್ರಧಾನ ವ್ಯವಸ್ಥಾಪಕ ಸುನಿಲ್ ಬೆಲ್ಲದ, ಬ್ಯಾಂಕಿನ ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>