<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ನಡೆದ ಲಿಂಗದೀಕ್ಷೆ (ಶಿವದೀಕ್ಷಾ) ಪಡೆದ ವಟುಗಳು ಭೀಕ್ಷಾಟನೆ ಮೂಲಕ ಜೋಳಿಗೆಯಲ್ಲಿ ತಂದ ₹ 50 ಸಾವಿರ ನೀಡುವುದಾಗಿ ಸ್ಥಳೀಯ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ಹೇಳಿದರು.</p>.<p>ಹಿರೇಮಠದ ಗುರುಶಾಂತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಜಂಗಮದೀಕ್ಷೆ ಕಾರ್ಯಕ್ರಮದಲ್ಲಿ ಜಂಗಮರ ಜೋಳಿಗೆಯಲ್ಲಿ ಬಂದ ಹಣವನ್ನು ಮಠಕ್ಕಾಗಿ ಬಳಸುತ್ತೇವೆ. ಆದರೆ ಕುಟುಂಬ ಸಾಗಿಸುತ್ತಿದ್ದ ಅಂಜಲಿ ಅಂಬಿಗೇರ ಅವರ ಹತ್ಯೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಣವನ್ನು ಸಹಾಯಾರ್ಥವಾಗಿ ನೀಡಲು ನಿರ್ಧರಿಸಿದ್ದೇವೆ’ ಎಂದರು.</p>.<p>ವೀರಶೈವ ಧರ್ಮದ ಮಠಗಳು ಕೇವಲ ಪೂಜೆ ಪುನಸ್ಕಾರ ಮಾಡಲು ಸೀಮಿತವಾಗದೆ, ಕಷ್ಟದಲ್ಲಿ ನೊಂದ ಕುಟುಂಬಕ್ಕೆ ನೆರವಾಗುವ ಕಾರ್ಯ ಕೂಡಾ ಮಾಡುತ್ತಿವೆ. ಭಾನುವಾರ ಹುಕ್ಕೇರಿ ಹಿರೇಮಠದಲ್ಲಿ ನೂರಾರು ವಟುಗಳಿಗೆ ನಡೆದ ಲಿಂಗದೀಕ್ಷೆಯಲ್ಲಿ ವಟುಗಳ ಜೋಳಿಗೆಯಲ್ಲಿ ಬಂದ ಹಣ ಗುರುವಿಗೆ ಕಾಣಿಕೆಯಾಗಿ ಸಲ್ಲಬೇಕು. ಆದರೆ ಆ ಹಣವನ್ನು ನೆರವಿನ ಕೆಲಸಕ್ಕೆ ಬಳಸಿದ್ದು ಸಾರ್ಥಕ’ ಎಂದು ಹೇಳಿದರು.</p>.<p>ಸರ್ಕಾರ ಕೂಡಲೇ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p> ಮಠದಿಂದ ಆರಂಭಗೊಂಡ ರಥೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಥಕ್ಕೆ ಭಕ್ತರು ತುಂಬಿದ ಕೊಡದ ನೀರು ಹಾಕಿ ಪೂಜೆ ಸಲ್ಲಿಸಿದರು.</p>.<p>ವಿರಕ್ತಮಠದ ಶಿವಬಸವ ಸ್ವಾಮೀಜಿ, ಮಲ್ಲಯ್ಯ ಮಠಪತಿ, ಸಂಸ್ಕೃತ ಪಾಠಶಾಲೆಯ ಸಂಪತ್ ಕುಮಾರ ಶಾಸ್ತ್ರಿ, ಚಂದ್ರಶೇಖರ್ ಶಾಸ್ತ್ರಿ, ಮಹಾಂತೇಶ ಹಿರೇಮಠ, ಈರಣ್ಣ ಗಣಾಚಾರಿ, ಮುಖ್ಯಾಧ್ಯಾಪಕ ಶಿವಾನಂದ ಜಿನರಾಳಿ, ಮುಖಂಡರಾದ ಆನಂದ ಪಟ್ಟಣಶೆಟ್ಟಿ ಸೇರಿದಂತೆ ನೂರಾರು ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ (ಬೆಳಗಾವಿ ಜಿಲ್ಲೆ):</strong> ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ನಡೆದ ಲಿಂಗದೀಕ್ಷೆ (ಶಿವದೀಕ್ಷಾ) ಪಡೆದ ವಟುಗಳು ಭೀಕ್ಷಾಟನೆ ಮೂಲಕ ಜೋಳಿಗೆಯಲ್ಲಿ ತಂದ ₹ 50 ಸಾವಿರ ನೀಡುವುದಾಗಿ ಸ್ಥಳೀಯ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ಹೇಳಿದರು.</p>.<p>ಹಿರೇಮಠದ ಗುರುಶಾಂತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಜಂಗಮದೀಕ್ಷೆ ಕಾರ್ಯಕ್ರಮದಲ್ಲಿ ಜಂಗಮರ ಜೋಳಿಗೆಯಲ್ಲಿ ಬಂದ ಹಣವನ್ನು ಮಠಕ್ಕಾಗಿ ಬಳಸುತ್ತೇವೆ. ಆದರೆ ಕುಟುಂಬ ಸಾಗಿಸುತ್ತಿದ್ದ ಅಂಜಲಿ ಅಂಬಿಗೇರ ಅವರ ಹತ್ಯೆಯಿಂದ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಣವನ್ನು ಸಹಾಯಾರ್ಥವಾಗಿ ನೀಡಲು ನಿರ್ಧರಿಸಿದ್ದೇವೆ’ ಎಂದರು.</p>.<p>ವೀರಶೈವ ಧರ್ಮದ ಮಠಗಳು ಕೇವಲ ಪೂಜೆ ಪುನಸ್ಕಾರ ಮಾಡಲು ಸೀಮಿತವಾಗದೆ, ಕಷ್ಟದಲ್ಲಿ ನೊಂದ ಕುಟುಂಬಕ್ಕೆ ನೆರವಾಗುವ ಕಾರ್ಯ ಕೂಡಾ ಮಾಡುತ್ತಿವೆ. ಭಾನುವಾರ ಹುಕ್ಕೇರಿ ಹಿರೇಮಠದಲ್ಲಿ ನೂರಾರು ವಟುಗಳಿಗೆ ನಡೆದ ಲಿಂಗದೀಕ್ಷೆಯಲ್ಲಿ ವಟುಗಳ ಜೋಳಿಗೆಯಲ್ಲಿ ಬಂದ ಹಣ ಗುರುವಿಗೆ ಕಾಣಿಕೆಯಾಗಿ ಸಲ್ಲಬೇಕು. ಆದರೆ ಆ ಹಣವನ್ನು ನೆರವಿನ ಕೆಲಸಕ್ಕೆ ಬಳಸಿದ್ದು ಸಾರ್ಥಕ’ ಎಂದು ಹೇಳಿದರು.</p>.<p>ಸರ್ಕಾರ ಕೂಡಲೇ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p> ಮಠದಿಂದ ಆರಂಭಗೊಂಡ ರಥೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಥಕ್ಕೆ ಭಕ್ತರು ತುಂಬಿದ ಕೊಡದ ನೀರು ಹಾಕಿ ಪೂಜೆ ಸಲ್ಲಿಸಿದರು.</p>.<p>ವಿರಕ್ತಮಠದ ಶಿವಬಸವ ಸ್ವಾಮೀಜಿ, ಮಲ್ಲಯ್ಯ ಮಠಪತಿ, ಸಂಸ್ಕೃತ ಪಾಠಶಾಲೆಯ ಸಂಪತ್ ಕುಮಾರ ಶಾಸ್ತ್ರಿ, ಚಂದ್ರಶೇಖರ್ ಶಾಸ್ತ್ರಿ, ಮಹಾಂತೇಶ ಹಿರೇಮಠ, ಈರಣ್ಣ ಗಣಾಚಾರಿ, ಮುಖ್ಯಾಧ್ಯಾಪಕ ಶಿವಾನಂದ ಜಿನರಾಳಿ, ಮುಖಂಡರಾದ ಆನಂದ ಪಟ್ಟಣಶೆಟ್ಟಿ ಸೇರಿದಂತೆ ನೂರಾರು ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>