<p><strong>ಹುಕ್ಕೇರಿ</strong>: ಸ್ಥಳೀಯ ಪುರಸಭೆಗೆ ಎರಡನೇ ಅವಧಿಗೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 9ನೇ ವಾರ್ಡ್ನ ಪದವಿ ಹೊಂದಿರುವ ಇಮ್ರಾನ್ ರಫಿಕ್ ಅಹ್ಮದ್ ಮೊಮೀನ್ ಅಧ್ಯಕ್ಷರಾಗಿ ಮತ್ತು 2ನೇ ವಾರ್ಡ್ ಜ್ಯೋತಿ ರಾಜೇಂದ್ರ ಬಡಿಗೇರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಎರಡೂ ಸ್ಥಾನಕ್ಕೂ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯಾಗಿದೆ ಎಂದು ಚುನಾವಣಾ ಅಧಿಕಾರಿಯೂ ಆದ ತಹಶೀಲ್ದಾರ್ ಮಂಜುಳಾ ನಾಯಕ್ ಫಲಿತಾಂಶ ಘೋಷಿಸಿದರು.</p>.<p>ಪಟ್ಟಣದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷ ಪುರಸಭೆಯ ಅಧಿಕಾರದ ಗದ್ದುಗೆ ಹಿಡಿದು ದಾಖಲೆ ಮಾಡಿತು.</p>.<p>23 ಸದಸ್ಯರನ್ನು ಒಳಗೊಂಡಿರುವ ಪುರಸಭೆಯಲ್ಲಿ 12 ಕಾಂಗ್ರೆಸ್ ಪಕ್ಷದ, 8 ಬಿಜೆಪಿಯ ಮತ್ತು 3 ಪಕ್ಷೇತರ ಸದಸ್ಯರು ಇದ್ದಾರೆ. ಬಿಜೆಪಿ ಈ ಬಾರಿಯೂ ಅಧಿಕಾರದ ಗದ್ದುಗೆ ಏರಲು ಪ್ರಯತ್ನ ಪಟ್ಟರೂ ವಿಫಲವಾಯಿತು. ಫಲಿತಾಂಶ ಹೊರಬಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಹಾರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಮೊದಲ ಅವಧಿಗೆ ನಮ್ಮ ಪಕ್ಷಕ್ಕೆ ಬಹುಮತವಿದ್ದರೂ ಗೊಂದಲದ ವಾತಾವರಣದಿಂದ ಅಧಿಕಾರ ತಪ್ಪಿತ್ತು. ಆದರೆ ಈ ಬಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸರಿಯಾದ ಮಾರ್ಗದರ್ಶನ ನೀಡಿ ಸದಸ್ಯರೇ ಆಯ್ಕೆ ಮಾಡಲು ಅಧಿಕಾರ ನೀಡಿದ್ದರು. ಎಲ್ಲ ಕಾಂಗ್ರೆಸ್ ಸದಸ್ಯರು ಮತ್ತು ಪಕ್ಷೇತರರು ಸೇರಿ ಅವಿರೋಧ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಬ್ಲಾಕ್ ಅಧ್ಯಕ್ಷ ವಿಜಯ್ ರವದಿ, ಮುಖಂಡರಾದ ಕಿರಣಸಿಂಗ್ ರಜಪೂತ್, ರವೀಂದ್ರ ಜಿಂಡ್ರಾಳಿ, ವೃಷಭ ಪಾಟೀಲ್, ಶಾನೂಲ್ ತಹಸೀಲ್ದಾರ್, ರಾಜು ಸಿದ್ನಾಳ್, ಮಹಾವೀರ ಮೊಹಿತೆ, ಮೌನೇಶ್ವರ ಪೋತದಾರ್ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಸ್ಥಳೀಯ ಪುರಸಭೆಗೆ ಎರಡನೇ ಅವಧಿಗೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 9ನೇ ವಾರ್ಡ್ನ ಪದವಿ ಹೊಂದಿರುವ ಇಮ್ರಾನ್ ರಫಿಕ್ ಅಹ್ಮದ್ ಮೊಮೀನ್ ಅಧ್ಯಕ್ಷರಾಗಿ ಮತ್ತು 2ನೇ ವಾರ್ಡ್ ಜ್ಯೋತಿ ರಾಜೇಂದ್ರ ಬಡಿಗೇರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಎರಡೂ ಸ್ಥಾನಕ್ಕೂ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯಾಗಿದೆ ಎಂದು ಚುನಾವಣಾ ಅಧಿಕಾರಿಯೂ ಆದ ತಹಶೀಲ್ದಾರ್ ಮಂಜುಳಾ ನಾಯಕ್ ಫಲಿತಾಂಶ ಘೋಷಿಸಿದರು.</p>.<p>ಪಟ್ಟಣದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷ ಪುರಸಭೆಯ ಅಧಿಕಾರದ ಗದ್ದುಗೆ ಹಿಡಿದು ದಾಖಲೆ ಮಾಡಿತು.</p>.<p>23 ಸದಸ್ಯರನ್ನು ಒಳಗೊಂಡಿರುವ ಪುರಸಭೆಯಲ್ಲಿ 12 ಕಾಂಗ್ರೆಸ್ ಪಕ್ಷದ, 8 ಬಿಜೆಪಿಯ ಮತ್ತು 3 ಪಕ್ಷೇತರ ಸದಸ್ಯರು ಇದ್ದಾರೆ. ಬಿಜೆಪಿ ಈ ಬಾರಿಯೂ ಅಧಿಕಾರದ ಗದ್ದುಗೆ ಏರಲು ಪ್ರಯತ್ನ ಪಟ್ಟರೂ ವಿಫಲವಾಯಿತು. ಫಲಿತಾಂಶ ಹೊರಬಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಹಾರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ಮೊದಲ ಅವಧಿಗೆ ನಮ್ಮ ಪಕ್ಷಕ್ಕೆ ಬಹುಮತವಿದ್ದರೂ ಗೊಂದಲದ ವಾತಾವರಣದಿಂದ ಅಧಿಕಾರ ತಪ್ಪಿತ್ತು. ಆದರೆ ಈ ಬಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸರಿಯಾದ ಮಾರ್ಗದರ್ಶನ ನೀಡಿ ಸದಸ್ಯರೇ ಆಯ್ಕೆ ಮಾಡಲು ಅಧಿಕಾರ ನೀಡಿದ್ದರು. ಎಲ್ಲ ಕಾಂಗ್ರೆಸ್ ಸದಸ್ಯರು ಮತ್ತು ಪಕ್ಷೇತರರು ಸೇರಿ ಅವಿರೋಧ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಬ್ಲಾಕ್ ಅಧ್ಯಕ್ಷ ವಿಜಯ್ ರವದಿ, ಮುಖಂಡರಾದ ಕಿರಣಸಿಂಗ್ ರಜಪೂತ್, ರವೀಂದ್ರ ಜಿಂಡ್ರಾಳಿ, ವೃಷಭ ಪಾಟೀಲ್, ಶಾನೂಲ್ ತಹಸೀಲ್ದಾರ್, ರಾಜು ಸಿದ್ನಾಳ್, ಮಹಾವೀರ ಮೊಹಿತೆ, ಮೌನೇಶ್ವರ ಪೋತದಾರ್ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>