<p><strong>ಹುಕ್ಕೇರಿ:</strong> ತಾಲ್ಲೂಕಿನ ನಿಡಸೋಸಿಯಲ್ಲಿ ಸಂಕೇಶ್ವರ ಯೋಜನಾ ಕಚೇರಿ, ಅಮ್ಮಿನಭಾವಿ ಕಾರ್ಯಕ್ಷೇತ್ರದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, 120 ಬಡ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮುಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.</p>.<p>ಶಾಸಕ ನಿಖಿಲ್ ಕತ್ತಿ ಮಾತನಾಡಿ, ‘ವಿವಿಧ ಯೋಜನೆಗಳ ಮೂಲಕ ಮಹಿಳೆಯರು ಸೇರಿದಂತೆ ಎಲ್ಲ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.</p>.<p>ಮಾಜಿ ಸಚಿವ ಎ.ಬಿ. ಪಾಟೀಲ, ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಬೋರಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮಾನೆ ಅಧ್ಯಕ್ಷತೆ ವಹಿಸಿದ್ದರು.</p>.<p>ಚಿಕ್ಕೋಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ವಿಠ್ಠಲ್ ಸಾಲ್ಯಾನ್, ವಿನಯಗೌಡ ಪಾಟೀಲ, ಅಮ್ಮಿನಭಾವಿ ಮಲ್ಲಿಕಾರ್ಜುನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ. ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಪರಗೌಡ ಪಾಟೀಲ, ಎಲ್.ಬಿ. ಪಾಟೀಲ, ಯೋಜನಾಧಿಕಾರಿ ವಿನಾಯಕ್ ಕಾಕಂಬಿ, ಎಲಿಮುನ್ನೋಳಿ ವಲಯ ಮೇಲ್ವಿಚಾರಕ ಭಾಸ್ಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ತಾಲ್ಲೂಕಿನ ನಿಡಸೋಸಿಯಲ್ಲಿ ಸಂಕೇಶ್ವರ ಯೋಜನಾ ಕಚೇರಿ, ಅಮ್ಮಿನಭಾವಿ ಕಾರ್ಯಕ್ಷೇತ್ರದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, 120 ಬಡ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮುಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.</p>.<p>ಶಾಸಕ ನಿಖಿಲ್ ಕತ್ತಿ ಮಾತನಾಡಿ, ‘ವಿವಿಧ ಯೋಜನೆಗಳ ಮೂಲಕ ಮಹಿಳೆಯರು ಸೇರಿದಂತೆ ಎಲ್ಲ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.</p>.<p>ಮಾಜಿ ಸಚಿವ ಎ.ಬಿ. ಪಾಟೀಲ, ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಬೋರಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮಾನೆ ಅಧ್ಯಕ್ಷತೆ ವಹಿಸಿದ್ದರು.</p>.<p>ಚಿಕ್ಕೋಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ವಿಠ್ಠಲ್ ಸಾಲ್ಯಾನ್, ವಿನಯಗೌಡ ಪಾಟೀಲ, ಅಮ್ಮಿನಭಾವಿ ಮಲ್ಲಿಕಾರ್ಜುನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ. ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಪರಗೌಡ ಪಾಟೀಲ, ಎಲ್.ಬಿ. ಪಾಟೀಲ, ಯೋಜನಾಧಿಕಾರಿ ವಿನಾಯಕ್ ಕಾಕಂಬಿ, ಎಲಿಮುನ್ನೋಳಿ ವಲಯ ಮೇಲ್ವಿಚಾರಕ ಭಾಸ್ಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>