<p>ಹುಕ್ಕೇರಿ: ಪಟ್ಟಣದ ಹೊರವಲಯದ ಜಮೀನಿನಲ್ಲಿ ಕುರಿ ಮರಿಗಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ 6 ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಜತೆಗೆ 8 ಮರಿಗಳಿಗೆ ತೀವ್ರ ಗಾಯಗಳಾಗಿದ್ದು, 5 ಮರಿಗಳು ನಾಪತ್ತೆಯಾಗಿವೆ ಎಂದು ಕುರಿಗಾಯಿ ಅಜಿತ್ ಲಗಮಣ್ಣ ಪೂಜೇರಿ ತಿಳಿಸಿದ್ದಾರೆ.</p>.<p>ಸಂಜೆ ಮೇಯಿಸಲು ಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿವೆ. ಕಣ್ಣೆದುರೇ ಮರಿಗಳನ್ನು ಕಚ್ಚಿ ಕೊಂದಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅವರು ಕಣ್ಣೀರಿಟ್ಟರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಉತ್ತರ ಪ್ರಾಂತ ಕಾರ್ಯದರ್ಶಿ ಶಿವರಾಜ್ ಅಂಬಾರಿ, ಕೂಡಲೇ ಕುರಿಗಾಹಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ನಾಳೆ ಕುರಿಗಾಯಿಗಳೊಂದಿಗೆ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಬೀದಿ ನಾಯಿಗಳ ಹಾವಳಿ ತಡೆದು, ಕುರಿಗಾಹಿಗಳಿಗೆ ರಕ್ಷಣೆ ನೀಡುವಂತೆ ಹಾಗೂ ಮೃತ ಕುರಿ ಮರಿಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಪುರಸಭೆ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1629045293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಕ್ಕೇರಿ: ಪಟ್ಟಣದ ಹೊರವಲಯದ ಜಮೀನಿನಲ್ಲಿ ಕುರಿ ಮರಿಗಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ 6 ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಜತೆಗೆ 8 ಮರಿಗಳಿಗೆ ತೀವ್ರ ಗಾಯಗಳಾಗಿದ್ದು, 5 ಮರಿಗಳು ನಾಪತ್ತೆಯಾಗಿವೆ ಎಂದು ಕುರಿಗಾಯಿ ಅಜಿತ್ ಲಗಮಣ್ಣ ಪೂಜೇರಿ ತಿಳಿಸಿದ್ದಾರೆ.</p>.<p>ಸಂಜೆ ಮೇಯಿಸಲು ಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿವೆ. ಕಣ್ಣೆದುರೇ ಮರಿಗಳನ್ನು ಕಚ್ಚಿ ಕೊಂದಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅವರು ಕಣ್ಣೀರಿಟ್ಟರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಉತ್ತರ ಪ್ರಾಂತ ಕಾರ್ಯದರ್ಶಿ ಶಿವರಾಜ್ ಅಂಬಾರಿ, ಕೂಡಲೇ ಕುರಿಗಾಹಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ನಾಳೆ ಕುರಿಗಾಯಿಗಳೊಂದಿಗೆ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಬೀದಿ ನಾಯಿಗಳ ಹಾವಳಿ ತಡೆದು, ಕುರಿಗಾಹಿಗಳಿಗೆ ರಕ್ಷಣೆ ನೀಡುವಂತೆ ಹಾಗೂ ಮೃತ ಕುರಿ ಮರಿಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಪುರಸಭೆ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-1629045293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>