ಅಖಿಲ ಭಾರತ ವೀರಶೈವ ಮಹಾಸಭಾದ ಮುಖಂಡ ಪ್ರದೀಪ ಕಂಕಣವಾಡಿ, ‘ಬಸವಣ್ಣನವರು ರಚಿಸಿದ ‘ಅನುಭವ ಮಂಟಪ’ ವಿಶ್ವದ ಪ್ರಥಮ ಸಂಸತ್ತಾಗಿದೆ. ಶರಣರ ನಾಡನ್ನು ನಿಜಾಮರು ಕೈವಶ ಮಾಡಿಕೊಂಡಿರುವುದು ನಮ್ಮ ದುರಂತ. ಪೀರ್ ಪಾಷಾ ಬಂಗಲೆಯನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಾರಕ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಜೂನ್ 12ರಂದು ಮಠಾಧೀಶರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.