<p><strong>ಹುಕ್ಕೇರಿ</strong>: ಯುವಜನತೆ ವಿವಿಧ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆ, ಪ್ರೇಮ ಪ್ರಕರಣದ ಹೆಚ್ಚಳ, ಪೊಕ್ಸೋ ಪ್ರಕರಣಗಳು ಯುವಜನತೆಯನ್ನು ದಾರಿತಪ್ಪಿಸುತ್ತಿವೆ ಎಂದು ಶಕ್ತಿಸದನ ಮಹಿಳಾ ಪುನರ್ವಸತಿ ಕೇಂದ್ರದ ಯೋಜನಾ ನಿರ್ದೇಶಕಿ ಸುರೇಖಾ ಪಾಟೀಲ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಉಳ್ಳಾಗಡ್ಡಿ ಖಾನಾಪೂರದ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ ಕಿಶೋರಿಯರಿಗಾಗಿ ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಕಲ್ಯಾಣ ಸಂಸ್ಥೆ, ಹಾಗೂ ವಿಹಾನ ಸಂಸ್ಥೆಯಿಂದ ಬುಧವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಕಿಶೋರಿಯರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>ಕಳ್ಳಸಾಗಾಣಿಕೆ, ಬಿಕ್ಷಾಟಣೆಗಾಗಿ ಮುಗ್ಧ ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ಪ್ರಕರಣಗಳು ತಡೆಯುವ ನಿಟ್ಟಿನಲ್ಲಿ ಕಿಶೋರಿಯರು ಎಚ್ಚರದಿಂದರಬೇಕು. ಲೈಂಗಿಕ ಶೋಷಣೆ, ಅಂಗಾಂಗ ವ್ಯಾಪಾರ ತಡೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು ಎಂದರು.</p>.<p>ಯಮಕನಮರಡಿ ಠಾಣೆಯ ಪಿ.ಎಸ್.ಐ. ಎಂ.ಕೆ.ಮುಗಳಿ ಮಾತನಾಡಿ, ಇಲಾಖೆಯ ಮೂಲಕ ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧಗಳು, ಡಿಜಿಟಲ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ನಿರಂತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಯುವಜನರು ಹೆಚ್ಚಿನ ಕಾಳಜಿವಹಿಸಿ ಸುರಕ್ಷಿತವಾಗಿರಬೇಕು ಎಂದು ಸಲಹೆ ನೀಡಿದರು.</p>.<p>ಎಸಿಡಿಪಿಒ ಮಹಾದೇವ ಕೋಳಿ ಮಾತನಾಡಿ, ಬಾಲ್ಯವಿವಾಹ ಪ್ರಕರಣ ತಡೆಯುವಲ್ಲಿ ಸರ್ವರ ಸಹಕಾರ ಅಗತ್ಯ. ಸ್ವಯಂ ಸೇವಾ ಸಂಸ್ಥೆಗಳು, ಸರ್ಕಾರ, ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದರು.</p>.<p>ಪ್ರಾಚಾರ್ಯ ಎಂ.ಎಂ.ಮಗದುಮ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಮಹಾವೀರ ಪಣಕಿ, ಸುಭಾಷ ಹೆಬ್ಬಾಳಿ, ವೈಜಯಂತಿ ಚೌಗಲಾ, ರೇಖಾ ಬೇನವಾಡ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು. <br /> ಉಪನ್ಯಾಸಕಿ ದಾನಮ್ಮ ಕೊಣ್ಣೂರ್ ಸ್ವಾಗತಿಸಿ ನಿರೂಪಿಸಿದರು. ಶಿವಾನಂದ ಮಠಪತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಯುವಜನತೆ ವಿವಿಧ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆ, ಪ್ರೇಮ ಪ್ರಕರಣದ ಹೆಚ್ಚಳ, ಪೊಕ್ಸೋ ಪ್ರಕರಣಗಳು ಯುವಜನತೆಯನ್ನು ದಾರಿತಪ್ಪಿಸುತ್ತಿವೆ ಎಂದು ಶಕ್ತಿಸದನ ಮಹಿಳಾ ಪುನರ್ವಸತಿ ಕೇಂದ್ರದ ಯೋಜನಾ ನಿರ್ದೇಶಕಿ ಸುರೇಖಾ ಪಾಟೀಲ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಉಳ್ಳಾಗಡ್ಡಿ ಖಾನಾಪೂರದ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ ಕಿಶೋರಿಯರಿಗಾಗಿ ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಕಲ್ಯಾಣ ಸಂಸ್ಥೆ, ಹಾಗೂ ವಿಹಾನ ಸಂಸ್ಥೆಯಿಂದ ಬುಧವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಕಿಶೋರಿಯರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p><p>ಕಳ್ಳಸಾಗಾಣಿಕೆ, ಬಿಕ್ಷಾಟಣೆಗಾಗಿ ಮುಗ್ಧ ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ಪ್ರಕರಣಗಳು ತಡೆಯುವ ನಿಟ್ಟಿನಲ್ಲಿ ಕಿಶೋರಿಯರು ಎಚ್ಚರದಿಂದರಬೇಕು. ಲೈಂಗಿಕ ಶೋಷಣೆ, ಅಂಗಾಂಗ ವ್ಯಾಪಾರ ತಡೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು ಎಂದರು.</p>.<p>ಯಮಕನಮರಡಿ ಠಾಣೆಯ ಪಿ.ಎಸ್.ಐ. ಎಂ.ಕೆ.ಮುಗಳಿ ಮಾತನಾಡಿ, ಇಲಾಖೆಯ ಮೂಲಕ ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧಗಳು, ಡಿಜಿಟಲ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ನಿರಂತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಯುವಜನರು ಹೆಚ್ಚಿನ ಕಾಳಜಿವಹಿಸಿ ಸುರಕ್ಷಿತವಾಗಿರಬೇಕು ಎಂದು ಸಲಹೆ ನೀಡಿದರು.</p>.<p>ಎಸಿಡಿಪಿಒ ಮಹಾದೇವ ಕೋಳಿ ಮಾತನಾಡಿ, ಬಾಲ್ಯವಿವಾಹ ಪ್ರಕರಣ ತಡೆಯುವಲ್ಲಿ ಸರ್ವರ ಸಹಕಾರ ಅಗತ್ಯ. ಸ್ವಯಂ ಸೇವಾ ಸಂಸ್ಥೆಗಳು, ಸರ್ಕಾರ, ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದರು.</p>.<p>ಪ್ರಾಚಾರ್ಯ ಎಂ.ಎಂ.ಮಗದುಮ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಮಹಾವೀರ ಪಣಕಿ, ಸುಭಾಷ ಹೆಬ್ಬಾಳಿ, ವೈಜಯಂತಿ ಚೌಗಲಾ, ರೇಖಾ ಬೇನವಾಡ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು. <br /> ಉಪನ್ಯಾಸಕಿ ದಾನಮ್ಮ ಕೊಣ್ಣೂರ್ ಸ್ವಾಗತಿಸಿ ನಿರೂಪಿಸಿದರು. ಶಿವಾನಂದ ಮಠಪತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>