<p>ಪ್ರಜಾವಾಣಿ ವಾರ್ತೆ</p>.<p><strong>ಬೆಳಗಾವಿ</strong>: ‘ಮಾನವೀಯತೆಯೇ ಹಿಂದೂ ಧರ್ಮದ ಸಾರ. ನಮ್ಮ ಧರ್ಮವನ್ನು ಅನುಸರಿಸುವುದರ ಜೊತೆಗೆ ಇತರ ಧರ್ಮಗಳನ್ನೂ ಗೌರವಿಸುವುದು ನಮ್ಮ ಸಂಸ್ಕೃತಿ. ಕೇವಲ ದ್ವೇಷದಿಂದ ದೇವರು ಮೆಚ್ಚುವುದಿಲ್ಲ. ಮನುಷ್ಯತ್ವ ಬೆಳೆಸಿಕೊಂಡಾಗಲೇ ಸಮಾಜ ಸುಂದರವಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ಬಸ್ತವಾಡ ಗ್ರಾಮದಲ್ಲಿ ₹2.80 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ₹1.18 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಭಾನುವಾರ ರಾತ್ರಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಗ್ರಾಮದ ಎಲ್ಲ ಜಾತಿಯವರೂ ಒಂದಾಗಿ ಉತ್ತಮ ಕಾರ್ಯಗಳಲ್ಲಿ ಭಾಗವಹಿಸುತ್ತಿರುವುದು ಮಾದರಿಯಾಗಿದೆ’ ಎಂದರು.</p>.<p>‘ಕ್ಷೇತ್ರ ಅಭಿವೃದ್ಧಿಯ ದಾರಿಯಲ್ಲಿ ವೇಗವಾಗಿ ಮುನ್ನಡೆಯುತ್ತಿದೆ. ಸೋಲಿನಲ್ಲಿಯೂ ಕೆಲಸ ಮಾಡಿದ್ದರಿಂದಲೇ ಜನರ ವಿಶ್ವಾಸ ಪಡೆದು ಭಾರೀ ಅಂತರದಿಂದ ಗೆಲುವು ಸಾಧಿಸಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಲ್ಲಿ ಸ್ವಾಭಿಮಾನ ಹೆಚ್ಚುತ್ತಿರುವುದನ್ನು ನೋಡುತ್ತಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ನಾವು ಮಾತಿನಲ್ಲಿ ಅಲ್ಲ, ಕೆಲಸದಲ್ಲಿ ನಂಬಿಕೆ ಇಟ್ಟವರು. ಜನರ ಸಮಸ್ಯೆಗಳಿಗೆ ಪರಿಹಾರ ಕೊಡುತ್ತೇವೆ; ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಜಗಳ ಹುಟ್ಟುಹಾಕುವ ರಾಜಕಾರಣ ನಮ್ಮದು ಅಲ್ಲ, ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಧೋರಣೆ ನಮ್ಮದು’ ಎಂದರು.</p>.<p>ಮುಖಂಡರಾದ ಚಂದ್ರಕಾಂತ ಪಾಟೀಲ, ಮನೋಹರ ಬಾಂಡಗಿ, ಶಿಲ್ಪಾ ಪಾಟೀಲ, ಮಾಣಿಕ್ ಸಂಕೇಶ್ವರಿ, ಪಿಡಿಒ ಆಶಾ, ನೇಮು ಪಾಟೀಲ, ಗೋಪಾಲ ಕಾಮಾಜ, ಶಿವಾಜಿ ಕಾಕತ್ಕರ್, ಈರಪ್ಪ ಚೌಗುಲೆ ಇತರರು ಇದ್ದರು.</p>.<div><blockquote>ಲಕ್ಷ್ಮಿ ಹೆಬ್ಬಾಳಕರ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ 25 ವರ್ಷದ ಯೋಜನೆ ರೂಪಿಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ದೂರದೃಷ್ಟಿಯೂ ಇದೆ </blockquote><span class="attribution">ಚನ್ನರಾಜ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯ</span></div>. <p> <strong>ಕಲ್ಯಾಣಮಂಟಪ ಸಾರ್ವಜನಿಕರಿಗೆ ಅರ್ಪಣೆ</strong> </p><p>ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕರ ಹಾಗೂ ರೈತರ ಮಕ್ಕಳ ಕಲ್ಯಾಣ ಹಾಗೂ ಇತರ ಕಾರ್ಯಕ್ರಮಗಳ ಅನುಕೂಲಕ್ಕಾಗಿ ₹2 ಕೋಟಿ ವೆಚ್ಚದಲ್ಲಿ ಮಾಸ್ತಮರ್ಡಿ ಗ್ರಾಮದಲ್ಲಿ ನಿರ್ಮಿಸಿದ ಕಲ್ಯಾಣಮಂಟಪವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸಾರ್ವಜನಿಕ ಸೇವೆಗೆ ಅರ್ಪಿಸಿದರು. ಭಾನುವಾರ ನಡೆದ ಮೊದಲ ಮದುವೆಯಲ್ಲಿ ಪಾಲ್ಗೊಂಡ ಅವರು ನವದಂಪತಿಗೆ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಳಗಾವಿ</strong>: ‘ಮಾನವೀಯತೆಯೇ ಹಿಂದೂ ಧರ್ಮದ ಸಾರ. ನಮ್ಮ ಧರ್ಮವನ್ನು ಅನುಸರಿಸುವುದರ ಜೊತೆಗೆ ಇತರ ಧರ್ಮಗಳನ್ನೂ ಗೌರವಿಸುವುದು ನಮ್ಮ ಸಂಸ್ಕೃತಿ. ಕೇವಲ ದ್ವೇಷದಿಂದ ದೇವರು ಮೆಚ್ಚುವುದಿಲ್ಲ. ಮನುಷ್ಯತ್ವ ಬೆಳೆಸಿಕೊಂಡಾಗಲೇ ಸಮಾಜ ಸುಂದರವಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ಬಸ್ತವಾಡ ಗ್ರಾಮದಲ್ಲಿ ₹2.80 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ₹1.18 ಕೋಟಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಭಾನುವಾರ ರಾತ್ರಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಗ್ರಾಮದ ಎಲ್ಲ ಜಾತಿಯವರೂ ಒಂದಾಗಿ ಉತ್ತಮ ಕಾರ್ಯಗಳಲ್ಲಿ ಭಾಗವಹಿಸುತ್ತಿರುವುದು ಮಾದರಿಯಾಗಿದೆ’ ಎಂದರು.</p>.<p>‘ಕ್ಷೇತ್ರ ಅಭಿವೃದ್ಧಿಯ ದಾರಿಯಲ್ಲಿ ವೇಗವಾಗಿ ಮುನ್ನಡೆಯುತ್ತಿದೆ. ಸೋಲಿನಲ್ಲಿಯೂ ಕೆಲಸ ಮಾಡಿದ್ದರಿಂದಲೇ ಜನರ ವಿಶ್ವಾಸ ಪಡೆದು ಭಾರೀ ಅಂತರದಿಂದ ಗೆಲುವು ಸಾಧಿಸಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಲ್ಲಿ ಸ್ವಾಭಿಮಾನ ಹೆಚ್ಚುತ್ತಿರುವುದನ್ನು ನೋಡುತ್ತಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ನಾವು ಮಾತಿನಲ್ಲಿ ಅಲ್ಲ, ಕೆಲಸದಲ್ಲಿ ನಂಬಿಕೆ ಇಟ್ಟವರು. ಜನರ ಸಮಸ್ಯೆಗಳಿಗೆ ಪರಿಹಾರ ಕೊಡುತ್ತೇವೆ; ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಜಗಳ ಹುಟ್ಟುಹಾಕುವ ರಾಜಕಾರಣ ನಮ್ಮದು ಅಲ್ಲ, ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಧೋರಣೆ ನಮ್ಮದು’ ಎಂದರು.</p>.<p>ಮುಖಂಡರಾದ ಚಂದ್ರಕಾಂತ ಪಾಟೀಲ, ಮನೋಹರ ಬಾಂಡಗಿ, ಶಿಲ್ಪಾ ಪಾಟೀಲ, ಮಾಣಿಕ್ ಸಂಕೇಶ್ವರಿ, ಪಿಡಿಒ ಆಶಾ, ನೇಮು ಪಾಟೀಲ, ಗೋಪಾಲ ಕಾಮಾಜ, ಶಿವಾಜಿ ಕಾಕತ್ಕರ್, ಈರಪ್ಪ ಚೌಗುಲೆ ಇತರರು ಇದ್ದರು.</p>.<div><blockquote>ಲಕ್ಷ್ಮಿ ಹೆಬ್ಬಾಳಕರ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ 25 ವರ್ಷದ ಯೋಜನೆ ರೂಪಿಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ದೂರದೃಷ್ಟಿಯೂ ಇದೆ </blockquote><span class="attribution">ಚನ್ನರಾಜ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯ</span></div>. <p> <strong>ಕಲ್ಯಾಣಮಂಟಪ ಸಾರ್ವಜನಿಕರಿಗೆ ಅರ್ಪಣೆ</strong> </p><p>ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕರ ಹಾಗೂ ರೈತರ ಮಕ್ಕಳ ಕಲ್ಯಾಣ ಹಾಗೂ ಇತರ ಕಾರ್ಯಕ್ರಮಗಳ ಅನುಕೂಲಕ್ಕಾಗಿ ₹2 ಕೋಟಿ ವೆಚ್ಚದಲ್ಲಿ ಮಾಸ್ತಮರ್ಡಿ ಗ್ರಾಮದಲ್ಲಿ ನಿರ್ಮಿಸಿದ ಕಲ್ಯಾಣಮಂಟಪವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸಾರ್ವಜನಿಕ ಸೇವೆಗೆ ಅರ್ಪಿಸಿದರು. ಭಾನುವಾರ ನಡೆದ ಮೊದಲ ಮದುವೆಯಲ್ಲಿ ಪಾಲ್ಗೊಂಡ ಅವರು ನವದಂಪತಿಗೆ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>