ಬೆಳಗಾವಿ: ಪಾಸ್ಗೆ ಮುಗಿಬಿದ್ದ ಜನರು!

ಬೆಳಗಾವಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ರಾಜ್ಯದ ಇತರ ಜಿಲ್ಲೆಗಳಿಗೆ ತೆರಳಲು ಬಯಸುವ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಿಸಿದ್ದರಿಂದ ಪಾಸ್ ಪಡೆಯಲು ಸೋಮವಾರ ಜನರು ಸರ್ಕಾರಿ ಕಚೇರಿಗಳಿಗೆ ಮುಗಿಬಿದ್ದರು.
‘ಜಿಲ್ಲೆಯಿಂದ ಇತರ ಜಿಲ್ಲೆಗಳಿಗೆ ಹೋಗಲು ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ ಜಿಲ್ಲಾ ಪ್ರಯಾಣಕ್ಕೆ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪಾಸ್ಗಳನ್ನು ನೀಡುವರು. ಅಂತೆಯೇ ರೀತಿ ಬೆಳಗಾವಿ ನಗರ ಮತ್ತು ತಾಲ್ಲೂಕಿನ ಪ್ರದೇಶದಲ್ಲಿರುವ ಜನರಿಗೆ ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಪಾಸ್ ಕೊಡಲಿದ್ದಾರೆ’ ಎಂದು ತಿಳಿಸಲಾಗಿತ್ತು. ಹೀಗಾಗಿ, ಈ ಕಚೇರಿಗಳಿಗೆ ಜನರು ಬಂದಿದ್ದರು.
ನಗರ ಹಾಗೂ ತಾಲ್ಲೂಕಿನ ನೂರಾರು ಜನರು ಡಿಸಿಪಿ ಕಚೇರಿಗೆ ಬಂದಿದ್ದರು. ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವುದನ್ನು ಅಧಿಕಾರಿಗಳು ತಿಳಿಸಿಕೊಟ್ಟರು.
ಅರ್ಜಿ ಸಲ್ಲಿಸಲು ಅಲ್ಲಿ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಹುತೇಕ ಮಂದಿ ಮಾಸ್ಕ್ ಧರಿಸಿಕೊಂಡೆ ಬಂದಿದ್ದರು. ಆದರೆ, ಅಂತರ ಕಾಯ್ದುಕೊಂಡಿಲ್ಲದಿರುವುದು ಕಂಡುಬಂತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.