‘ಮುಂದಿನ ಚುನಾವಣೆಯಲ್ಲಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗಾಗಿ ಬಹಳ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಪಕ್ಷದ ಪರ ಕೆಲಸ ಮಾಡಬೇಕು. ಪಕ್ಷಕ್ಕೆ ದ್ರೋಹ ಮಾಡುವುದಿಲ್ಲವೆಂದು ಜ್ಯೋತಿಬಾ ದೇವರ ಮೂರ್ತಿ ಮುಟ್ಟಿ ಆಣೆ ಮಾಡಬೇಕು. ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುವುದು ನಮ್ಮ ಸಂಕಲ್ಪವಾಗಿದ್ದು, ಎಲ್ಲರೂ ಸಹಕರಿಸಬೇಕು’ ಎಂದರು.