ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಕರೆದಿದ್ದಕ್ಕೆ ಹೋಗುತ್ತಿದ್ದೇನೆ: ಉಮೇಶ ಕತ್ತಿ

Last Updated 12 ಜನವರಿ 2021, 9:35 IST
ಅಕ್ಷರ ಗಾತ್ರ

ಬೆಳಗಾವಿ: ‘ಹೈಕಮಾಂಡ್ ಮತ್ತು ಪಕ್ಷದ ವರಿಷ್ಠರು ಮನಸ್ಸು ಮಾಡಿದರೆ ನಾನು ಮಂತ್ರಿಯಾಗುತ್ತೇನೆ. ಅವಕಾಶ ಸಿಕ್ಕರೆ ಒಳ್ಳೆಯ ಅಭಿವೃದ್ಧಿ ಕೆಲಸ ಮಾಡಿ ತೋರಿಸುತ್ತೇನೆ’ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಿಂದ ಮಂಗಳವಾರ ಬೆಂಗಳೂರಿಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಭೆ ಇದೆ ಬೆಂಗಳೂರಿಗೆ ಬಾ ಎಂದು ಮುಖ್ಯಮಂತ್ರಿ ಕರೆ ಮಾಡಿದ್ದರು. ಹೀಗಾಗಿ ಹೋಗುತ್ತಿದ್ದೇನೆ. ವಾರದಲ್ಲಿ 2–3 ಬಾರಿ ಮುಖ್ಯಮಂತ್ರಿ ಕರೆ ಮಾಡುತ್ತಿರುತ್ತಾರೆ; ಏನೇನೋ ಮಾತನಾಡುತ್ತಿರುತ್ತೇವೆ. ಅದನ್ನೆಲ್ಲಾ ಹೇಳುವುದಕ್ಕೆ ಬರುವುದಿಲ್ಲ’ ಎಂದರು.

‘ಎಂಟು ಬಾರಿ ಶಾಸಕನಾಗಿ ಮೂರು ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ‌ ನಿಭಾಯಿಸಲು ಸಿದ್ಧನಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT