ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಚುನಾವಣೆ ಘೋಷಣೆಯಾದ ನಂತರವಷ್ಟೇ ಚರ್ಚೆ ನಡೆಯುತ್ತದೆ. ಡಿ.4ರಂದು ಪಕ್ಷದ ವಿಶೇಷ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಚರ್ಚೆಯಾಗುವುದಿಲ್ಲ. ಚುನಾವಣೆ ಘೋಷಣೆ ಆಗದಿರುವುದು ಇದಕ್ಕೆ ಕಾರಣ. ವದಂತಿಗಳಿಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದರು.