ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವೀರಶೈವ ಮುಖಂಡರನ್ನು ಪಕ್ಷಕ್ಕೆ ಆಹ್ವಾನ ಮಾಡುತ್ತಿದ್ದೇನೆ. ಗೋಕಾಕದಲ್ಲಿ ಬದಲಾವಣೆ ಮಾಡೋಣ ಎಂದು ನಿಮಗೂ ಆಹ್ವಾನ ಮಾಡಿದ್ದೇನೆ ಎಂದು ಸತೀಶ ತಿಳಿಸಿದರು. ಮುಖಂಡರು, ಹಿತೈಷಿಗಳು, ಬೆಂಬಲಿಗರು ಹಾಗೂ ನನ್ನನ್ನು ನಂಬಿದ ಕಾರ್ಯಕರ್ತರ ಅಭಿಪ್ರಾಯ ಆಲಿಸಿ ನಿರ್ಧಾರ ತಿಳಿಸುತ್ತೇನೆ ಎಂದು ಅವರಿಗೆ ಹೇಳಿದ್ದೇನೆ’ ಎಂದರು.