ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಅವರ ಪಕ್ಷಕ್ಕೆ ಬಹುಮತ ಇದೆಯೇ? ಇಲ್ಲದ ಮೇಲೆ ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಬಿಳಿದು ಕರಿ ಮಾಡಿ, ಕರಿದು ಬಿಳಿ ಮಾಡಿ ಆಗೋಕೆ ಆಗಲ್ಲ ಎಂದು ವ್ಯಂಗ್ಯವಾಡಿದರು.