ಬೆಳಗಾವಿ: ‘ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಯ ಯಾರನ್ನೇ ಕೈಬಿಟ್ಟರೂ ನನಗೆ ಆಕ್ಷೇಪವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರಲಿದ್ದೇನೆ. ಪಕ್ಷದಲ್ಲಿ ಉಂಟಾಗಲಿರುವ ಬಿರುಕುಗಳನ್ನು ತಪ್ಪಿಸಲು ವರಿಷ್ಠರು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸುವ ವಿಶ್ವಾಸವಿದೆ’ ಎಂದು ಹೇಳಿದರು.