ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮಿ ಹೆಬ್ಬಾಳಕರ ಯಾರೆಂದು ಗೊತ್ತಿಲ್ಲ: ರಮೇಶ

Last Updated 10 ಜನವರಿ 2021, 15:45 IST
ಅಕ್ಷರ ಗಾತ್ರ

ಬೆಳಗಾವಿ: ‘ಲಕ್ಷ್ಮಿ ಹೆಬ್ಬಾಳಕರ ಯಾರೆನ್ನುವುದು ಗೊತ್ತಿಲ್ಲ. ಅವರ ಪರಿಚಯವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

‘ಬಿಜೆಪಿಯವರದು ಸುಳ್ಳು ಹೇಳುವ ಸಂಸ್ಕೃತಿ’ ಎಂಬ ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆಗೆ ಮೇಲಿನಂತೆ ಅವರು ಪ್ರತಿಕ್ರಿಯಿಸಿದರು.

‘ವಂಚನೆ ಪ್ರಕರಣದಲ್ಲಿ ಬಂಧಿತನಾಗಿರುವ ಯುವರಾಜ್‌ (ಸ್ವಾಮಿ) ನನ್ನನ್ನೂ ಒಂದೆರಡು ಬಾರಿ ಭೇಟಿಯಾಗಿದ್ದ. ಆದರೆ, ಫೋಟೊ ತೆಗೆಸಿಕೊಂಡಿಲ್ಲ. ಉನ್ನತ ಸ್ಥಾನದಲ್ಲಿರುತ್ತೇವೆ ಎಂದು ಹಲವರು ಬಂದು ಭೇಟಿಯಾಗುತ್ತಾರೆ. ಫೋಟೊ ತೆಗೆಸಿಕೊಳ್ಳುತ್ತಾರೆ. ಹಾಗೆಂದ ಮಾತ್ರಕ್ಕೆ ಮಂತ್ರಿಗಳೆಲ್ಲರೂ ಆರೋಪಿಗಳು ಎಂದು ಮಾಧ್ಯಮದಲ್ಲಿ ಬಿಂಬಿಸುವುದು ತ‍ಪ್ಪು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT