‘ಕೇಂದ್ರದ ಬಜೆಟ್ ಐತಿಹಾಸಿಕವಾಗಿದ್ದು, ಎಲ್ಲ ವರ್ಗಗಳಿಗೂ ಅನುಕೂಲವಾಗುವಂಥದ್ದಾಗಿದೆ. ಚುನಾವಣೆಗೂ ಮುನ್ನ ಮಂಡಿಸುವ ಬಜೆಟ್ ಯಾವಾಗಲೂ ರಾಜಕೀಯ ಉದ್ದೇಶವನ್ನೇ ಒಳಗೊಂಡಿರುತ್ತದೆ. ಅದರಲ್ಲಿ ಮುಚ್ಚು–ಮರೆ ಏನಿಲ್ಲ. ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ವಿಚಾರ ಮಾಡಿ ಮಾತನಾಡಬೇಕು’ ಎಂದು ಬಜೆಟ್ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.