ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಹಿರಿಯರು, ಮುಖಂಡರು ಹಾಗೂ ಮುಖ್ಯಮಂತ್ರಿ ಜೊತೆ ಚರ್ಚೆ ಆಗಬೇಕು. ಸಾಧಕ-ಬಾಧಕಗಳನ್ನು ಯೋಚಿಸಬೇಕಾಗುತ್ತದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲೆ ವಿಭಜನೆ ಅಗತ್ಯ. ಕನ್ನಡಪರ ಹೋರಾಟಗಾರ ಡಾ.ಪಾಟೀಲ ಪುಟ್ಟಪ್ಪ ಅವರು ಕಾನೂನಾತ್ಮಕವಾಗಿ ಚಿಕ್ಕೋಡಿಗಿಂತ ನಿಪ್ಪಾಣಿಯೇ ಜಿಲ್ಲೆ ಆಗಬೇಕು ಎಂದು ಒಮ್ಮೆ ಹೇಳಿದ್ದರು’ ಎಂದು ಸ್ಮರಿಸಿದರು.