ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ‘ನೂತನ ಮಂತ್ರಿ ಮಂಡಲದಲ್ಲಿ ನನಗೆ ಸ್ಥಾನ ಸಿಗುವ ವಿಶ್ವಾಸವಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಸಮೀಪದ ಬಂಬಲವಾಡ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಉಚಿತವಾಗಿ ದಿನಸಿ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.
‘ಸಮಾಜದ ಹಿರಿಯರು, ಹಿಂದಿನ ಮಂತ್ರಿ ಮಂಡಲದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಗೋವಿದ ಕಾರಜೊಳ ಅವರೊಂದಿಗೆ ನನಗೂ ಮಂತ್ರಿ ಸ್ಥಾನ ದೊರೆಯಲಿದೆ. ಸಿಕ್ಕರೆ ನನ್ನ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ. ಒಂದು ವೇಳೆ ನೀಡದಿದ್ದಲ್ಲಿ ಶಾಸಕನಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುವೆ’ ಎಂದರು.