ಶುಕ್ರವಾರ ಉಗಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾಂಗ್ರೆಸ್ ಸೇರುವುದಾಗಿ ಹಬ್ಬಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರಾದುದು. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. 4 ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ನನ್ನ ಬೆನ್ನಿಗಿದ್ದಾರೆ. ವದಂತಿಗಳಿಂದ ನೋವಾಗಿದೆ’ ಎಂದರು.