ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಆಗಿ ಎಂದು ಅವರು ಹೇಳಿದ್ದಾರೆ. ಆದರೆ, ಇತ್ತೀಚೆಗೆ ನವದೆಹಲಿಗೆ ಹೋಗಿ ಬಂದ ವಿಚಾರವನ್ನು ಅಂತರ ಕಾಯ್ದುಕೊಂಡು ಅವರಿಗೆ ತಿಳಿಸಿದ್ದೇನೆ. ಹೀಗಾಗಿ ನಾನು ಕ್ವಾರಂಟೈನ್ ಆಗುವುದಿಲ್ಲ’ ಎಂದು ತಿಳಿಸಿದರು.