<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ವಯಂಪ್ರೇರಿತವಾಗಿ ಸ್ಪರ್ಧೆ ಮಾಡಿದ್ದೇನೆ. ಇಲ್ಲಿ ಏನೇ ಆದರೂ ನಾನೇ ಹೊಣೆ ಹೊರುತ್ತೇನೆ. ಅಂತೆಯೇ ರಾಜ್ಯ ಹಾಗೂ ದೇಶದಲ್ಲಿ ಆರ್ಥಿಕ ಏರಿಳಿತವಾದರೆ ಸರ್ಕಾರವೇ ಹೊಣೆ ಆಗುತ್ತದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರೇ ಸರ್ಕಾರದ ವೈಫಲ್ಯಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಜನರು ತಕ್ಕ ಉತ್ತರ ಕೊಡುತ್ತಾರೆ. ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ವಿವಿಧ ಪಕ್ಷ, ಇತರ ನಾಯಕರು, ಸಮಾಜದ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಸಹಕಾರ ನೀಡಲಿದ್ದಾರೆ ಎಂಬ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಓದಿ:</strong><a href="https://www.prajavani.net/district/belagavi/lakshmi-hebbalakara-start-campaigning-for-sathish-jarakiholi-bye-elections-of-belagavi-loksabha-seat-818174.html" itemprop="url">ಬೆಳಗಾವಿ ಕ್ಷೇತ್ರ ಉಪ ಚುನಾವಣೆ: ಸತೀಶ ಪರ ಅಬ್ಬರದ ಪ್ರಚಾರಕ್ಕಿಳಿದ ಲಕ್ಷ್ಮಿ</a></p>.<p>‘ಬಿಜೆಪಿ ಸರ್ಕಾರದ ಸುಳ್ಳು ಹೇಳಿಕೆಗಳಿಂದ ಜನರು ಬೇಸತ್ತಿದ್ದಾರೆ’ ಎಂದರು.</p>.<p>‘ಜಿಲ್ಲೆಯ ಹಲವು ನಾಯಕರು ಪಕ್ಷ ಸೇರಲು ಅರ್ಜಿ ಕೊಟ್ಟಿದ್ದಾರೆ. ದಿನಾಂಕ ನಿಗದಿಪಡಿಸಿ ಅವರನ್ನು ಸೇರಿಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಅವರು ಪ್ರತಿಕ್ರಿಯಿಸಿದರು.</p>.<p>‘ಎರಡು ಲಕ್ಷದಿಂದ ಗೆದ್ದರೂ ಗೆಲವೆ. ಒಂದು ಮತದಿಂದ ಗೆದ್ದರೂ ಗೆಲುವೆ’ ಎಂದು ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ವಯಂಪ್ರೇರಿತವಾಗಿ ಸ್ಪರ್ಧೆ ಮಾಡಿದ್ದೇನೆ. ಇಲ್ಲಿ ಏನೇ ಆದರೂ ನಾನೇ ಹೊಣೆ ಹೊರುತ್ತೇನೆ. ಅಂತೆಯೇ ರಾಜ್ಯ ಹಾಗೂ ದೇಶದಲ್ಲಿ ಆರ್ಥಿಕ ಏರಿಳಿತವಾದರೆ ಸರ್ಕಾರವೇ ಹೊಣೆ ಆಗುತ್ತದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರೇ ಸರ್ಕಾರದ ವೈಫಲ್ಯಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಜನರು ತಕ್ಕ ಉತ್ತರ ಕೊಡುತ್ತಾರೆ. ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ವಿವಿಧ ಪಕ್ಷ, ಇತರ ನಾಯಕರು, ಸಮಾಜದ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಸಹಕಾರ ನೀಡಲಿದ್ದಾರೆ ಎಂಬ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಓದಿ:</strong><a href="https://www.prajavani.net/district/belagavi/lakshmi-hebbalakara-start-campaigning-for-sathish-jarakiholi-bye-elections-of-belagavi-loksabha-seat-818174.html" itemprop="url">ಬೆಳಗಾವಿ ಕ್ಷೇತ್ರ ಉಪ ಚುನಾವಣೆ: ಸತೀಶ ಪರ ಅಬ್ಬರದ ಪ್ರಚಾರಕ್ಕಿಳಿದ ಲಕ್ಷ್ಮಿ</a></p>.<p>‘ಬಿಜೆಪಿ ಸರ್ಕಾರದ ಸುಳ್ಳು ಹೇಳಿಕೆಗಳಿಂದ ಜನರು ಬೇಸತ್ತಿದ್ದಾರೆ’ ಎಂದರು.</p>.<p>‘ಜಿಲ್ಲೆಯ ಹಲವು ನಾಯಕರು ಪಕ್ಷ ಸೇರಲು ಅರ್ಜಿ ಕೊಟ್ಟಿದ್ದಾರೆ. ದಿನಾಂಕ ನಿಗದಿಪಡಿಸಿ ಅವರನ್ನು ಸೇರಿಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಅವರು ಪ್ರತಿಕ್ರಿಯಿಸಿದರು.</p>.<p>‘ಎರಡು ಲಕ್ಷದಿಂದ ಗೆದ್ದರೂ ಗೆಲವೆ. ಒಂದು ಮತದಿಂದ ಗೆದ್ದರೂ ಗೆಲುವೆ’ ಎಂದು ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>