ಇಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಉಪವಿಭಾಗ ಕಚೇರಿಗಳಿರುವ ಬೈಲಹೊಂಗಲ, ಚಿಕ್ಕೋಡಿ, ಬೆಳಗಾವಿ ಜಿಲ್ಲೆ ರಚನೆ ಆಗಬೇಕು. ಅಲ್ಲದೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಸಿ ಕಚೇರಿ ಇರುವ ಕೇಂದ್ರಗಳೇ ಜಿಲ್ಲಾ ಕೇಂದ್ರವಾಗಬೇಕು ಎಂಬ ಅನಿಸಿಕೆ ನನ್ನದು. ಜಿಲ್ಲಾ ವಿಭಜನೆ ಹೋರಾಟದ ನೇತೃತ್ವ ನಾನೇ ವಹಿಸಿಕೊಳ್ಳುವೆ’ ಎಂದರು.