ಬೆಳಗಾವಿ: ‘ಒಳ್ಳೆಯ ಕೆಲಸ ಮಾಡುವವರಿಗೆ ನೂರೆಂಟು ವಿಘ್ನಗಳು ಸಹಜ. ನಾನು ಕ್ಷೇತ್ರದ ಜನರಿಗಾಗಿ ದುಡಿಯುತ್ತಿರುವುದನ್ನು ಸಹಿಸದವರಿಂದ ನಿತ್ಯ ಸಂಕಷ್ಟ ಹಾಗೂ ಸಂಘರ್ಷಗಳು ಎದುರಾಗುತ್ತಿದೆ. ಆದರೆ, ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದೇನೆ. ಮುಂದೆಯೂ ಎಷ್ಟೇ ಕಷ್ಟ ಬಂದರೂ ಅವುಗಳನ್ನು ಜನರಿಗಾಗಿ ಎದುರಿಸಲು ಸಿದ್ಧವಿದ್ದೇನೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.