‘ಗಡಿ ತಗಾದೆ, ಅಂತರರಾಜ್ಯ ನೆಲ, ಜಲ ವಿವಾದ, ಗಡಿ ಭಾಗದ ಕನ್ನಡ ಶಾಲೆಗಳ ದುಃಸ್ಥಿತಿ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳುವಂತೆ ಸರ್ಕಾರವನ್ನು ಬಡಿದೆಚ್ಚರಿಸುವ ಕಾರ್ಯ ಕಸಾಪದಿಂದ ಆಗಬೇಕಾಗಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವ ಕಾರ್ಯವೂ ನಡೆಯಬೇಕಿದೆ. ಆದರೆ, ಕಸಾಪದ ಅಂಗಳದಲ್ಲಿ ಪ್ರಸ್ತುತ ಭ್ರಷ್ಟಾಚಾರ ಎಂಬುದು ಹೆಮ್ಮರವಾಗಿ ಬೆಳೆದಿದೆ’ ಎಂದು ಆರೋಪಿಸಿದರು.