ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರೆಲ್ಲ ಒಂದಾದರೆ, ನೀವು ಹೇಳಿದವರದ್ದೇ ಆಡಳಿತ: ಬೊಮ್ಮಾಯಿ

Last Updated 28 ಮಾರ್ಚ್ 2023, 18:27 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ‘ರಾಜ್ಯದಲ್ಲಿ ಪರಿಶಿಷ್ಟ ಜನರೆಲ್ಲ ಒಂದಾದರೆ, ನೀವು ಹೇಳಿದವರದ್ದೇ ಆಡಳಿತ ನಡೆಯುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಗೋಕಾಕ, ಅರಭಾವಿ ಹಾಗೂ ಅಥಣಿ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ನಿರ್ಧಾರವೇ ರಾಜ್ಯದ ನಿರ್ಧಾರ ಕೂಡ ಆಗುತ್ತದೆ’ ಎಂದು ಅವರು ತಿಳಿಸಿದರು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ‘ಕರ್ನಾಟಕದಲ್ಲಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವ ಏಕಮಾತ್ರ ಪಕ್ಷ ಬಿಜೆಪಿ. ಲಿಂಗಾಯತ ಎಲ್ಲ ಪಂಗಡದವರೂ ಒಂದಾಗಿರಿ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಮತಗಳು ಒಡೆದುಹೋಗದಂತೆ ಎಚ್ಚರಿಕೆ ವಹಿಸಿ’ ಎಂದರು.

‘ರಾಹುಲ್ ಗಾಂಧಿ ಆದಿಯಾಗಿ ಎಲ್ಲ ಕಾಂಗ್ರೆಸ್ಸಿಗರೂ ಬೋಗಸ್ ಮಾತನಾಡುತ್ತಾರೆ. ಅವರು ನೀಡಿದ ಗ್ಯಾರಂಟಿಗಳನ್ನು ಯಾರೂ ಪೂರೈಸಲು ಸಾಧ್ಯವಿಲ್ಲ. ಈ ಬೋಗಸ್ ಭರವಸೆ ನಂಬಬೇಡಿ’ ಎಂದು ಶಾಸಕ ರಮೇಶ ಜಾರಕಿಹೊಳಿ ಕಿಡಿ ಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT