ಗೋಕಾಕ (ಬೆಳಗಾವಿ ಜಿಲ್ಲೆ): ‘ರಾಜ್ಯದಲ್ಲಿ ಪರಿಶಿಷ್ಟ ಜನರೆಲ್ಲ ಒಂದಾದರೆ, ನೀವು ಹೇಳಿದವರದ್ದೇ ಆಡಳಿತ ನಡೆಯುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ಗೋಕಾಕ, ಅರಭಾವಿ ಹಾಗೂ ಅಥಣಿ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
‘ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ನಿರ್ಧಾರವೇ ರಾಜ್ಯದ ನಿರ್ಧಾರ ಕೂಡ ಆಗುತ್ತದೆ’ ಎಂದು ಅವರು ತಿಳಿಸಿದರು.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ‘ಕರ್ನಾಟಕದಲ್ಲಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವ ಏಕಮಾತ್ರ ಪಕ್ಷ ಬಿಜೆಪಿ. ಲಿಂಗಾಯತ ಎಲ್ಲ ಪಂಗಡದವರೂ ಒಂದಾಗಿರಿ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಮತಗಳು ಒಡೆದುಹೋಗದಂತೆ ಎಚ್ಚರಿಕೆ ವಹಿಸಿ’ ಎಂದರು.
‘ರಾಹುಲ್ ಗಾಂಧಿ ಆದಿಯಾಗಿ ಎಲ್ಲ ಕಾಂಗ್ರೆಸ್ಸಿಗರೂ ಬೋಗಸ್ ಮಾತನಾಡುತ್ತಾರೆ. ಅವರು ನೀಡಿದ ಗ್ಯಾರಂಟಿಗಳನ್ನು ಯಾರೂ ಪೂರೈಸಲು ಸಾಧ್ಯವಿಲ್ಲ. ಈ ಬೋಗಸ್ ಭರವಸೆ ನಂಬಬೇಡಿ’ ಎಂದು ಶಾಸಕ ರಮೇಶ ಜಾರಕಿಹೊಳಿ ಕಿಡಿ ಕಾರಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.