<p><strong>ಬೆಳಗಾವಿ</strong>: ‘ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪ ಬಂದರೆ ಖಂಡಿತವಾಗಿಯೂ ಸಕಾರಾತ್ಮಕ ಚರ್ಚೆ ನಡೆಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆ ವಿಭಜನೆ ಕುರಿತು ಮೇಲಿಂದ ಮೇಲೆ ಧ್ವನಿ ಕೇಳಿಬರುತ್ತಿದೆ. ಸದನದಲ್ಲಿ ಚರ್ಚಿಸೋಣ’ ಎಂದರು.</p><p>‘ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಫೋಟೊ ತೆರವು ಮಾಡುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಸಿದ ಅವರು, ‘ಆ ಸಚಿವರ ಹತ್ತಿರವೇ ಮಾತನಾಡಿ. ಭಾವಚಿತ್ರ ಹಾಕುವುದು, ಬಿಡುವುದು ಸಭಾಧ್ಯಕ್ಷರ ವಿಚಾರಕ್ಕೆ ಬಿಟ್ಟಿದ್ದು’ ಎಂದರು.</p><p>‘ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಎಲ್ಲ ಸೇರಿ ನಮ್ಮದು ಸಮಗ್ರ ಕರ್ನಾಟಕ. ಈ ಭಾಗದ ಶಾಸಕರು ಉತ್ತರ ಕರ್ನಾಟಕ ವಿಷಯಗಳನ್ನು ಚರ್ಚೆಗೆ ಎತ್ತಿಕೊಂಡರೆ ಸರ್ಕಾರ ಸ್ಪಂದಿಸುತ್ತದೆ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪ ಬಂದರೆ ಖಂಡಿತವಾಗಿಯೂ ಸಕಾರಾತ್ಮಕ ಚರ್ಚೆ ನಡೆಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆ ವಿಭಜನೆ ಕುರಿತು ಮೇಲಿಂದ ಮೇಲೆ ಧ್ವನಿ ಕೇಳಿಬರುತ್ತಿದೆ. ಸದನದಲ್ಲಿ ಚರ್ಚಿಸೋಣ’ ಎಂದರು.</p><p>‘ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಫೋಟೊ ತೆರವು ಮಾಡುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಸಿದ ಅವರು, ‘ಆ ಸಚಿವರ ಹತ್ತಿರವೇ ಮಾತನಾಡಿ. ಭಾವಚಿತ್ರ ಹಾಕುವುದು, ಬಿಡುವುದು ಸಭಾಧ್ಯಕ್ಷರ ವಿಚಾರಕ್ಕೆ ಬಿಟ್ಟಿದ್ದು’ ಎಂದರು.</p><p>‘ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಎಲ್ಲ ಸೇರಿ ನಮ್ಮದು ಸಮಗ್ರ ಕರ್ನಾಟಕ. ಈ ಭಾಗದ ಶಾಸಕರು ಉತ್ತರ ಕರ್ನಾಟಕ ವಿಷಯಗಳನ್ನು ಚರ್ಚೆಗೆ ಎತ್ತಿಕೊಂಡರೆ ಸರ್ಕಾರ ಸ್ಪಂದಿಸುತ್ತದೆ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>