<p>ಚನ್ನಮ್ಮನ ಕಿತ್ತೂರು: ‘ಕಿತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬರುವ ಎಲ್ಲ ಶಾಲೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಕೈಯಲ್ಲಿ ನೀರಿನ ಬಿಂದಿಗೆ ಕಂಡರೆ ಅಂಥವರ ಮೇಲೆ ನಿರ್ದಾಕ್ಷಣ್ಯವಾಗಿ ಕೈಗೊಳ್ಳಲಾಗುವುದು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿರುವ ಎಲ್ಲ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಪೈಪುಗಳಲ್ಲಿ ಸೋರಿಕೆ ಉಂಟಾಗಿದ್ದರೆ ಕೂಡಲೇ ಸರಿಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಬೈಲಹೊಂಗಲ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ ಮಾತನಾಡಿ, ‘ಪ್ರತಿ ತಿಂಗಳು ಮೂರನೇ ಶನಿವಾರ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ನಾಲ್ಕನೆಯ ಶನಿವಾರ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಪಾಲಕರ ಸಭೆ ಕಡ್ಡಾಯವಾಗಿ ಕರೆಯಬೇಕು’ ಸೂಚಿಸಿದರು.</p>.<p>ಉಪ ಖಜಾನೆ ಇಲಾಖೆ ಅಧಿಕಾರಿ ಚಂದ್ರಶೇಖರ ನಡುವಿನಮನಿ ಮಾತನಾಡಿ, ‘ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಅಧಿಕಾರ ಹಂಚಿಕೆ ಮಾಡಿಕೊಡಬೇಕು. ಹಾಗೆ ಮಾಡಿದರೆ ನೌಕರರ ಸಂಬಳ ವಿಳಂಬವಾಗುವುದಿಲ್ಲ’ ಎಂದು ಮನವಿ ಮಾಡಿದರು.</p>.<p>‘ಕೆಲವು ದೊಡ್ಡ ಕಚೇರಿಗಳಲ್ಲಿ ಕೆಲವು ಅಧಿಕಾರಿಗಳು ಬಿಲ್ ಮಾಡುವ ಅಧಿಕಾರವನ್ನು ತಮ್ಮ ಹತ್ತಿರವೇ ಇಟ್ಟುಕೊಂಡಿದ್ದಾರೆ. ಇದರಿಂದ ಕೆಲವರ ಸಂಬಳ ಪಾವತಿ ಮಾಡುವುದು ತಡವಾಗುತ್ತಿದೆ’ ಎಂದು ಶಾಸಕ ಬಾಬಾಸಾಹೇಬ ಅವರ ಗಮನಕ್ಕೆ ತಂದರು.</p>.<p>‘ಹಿಂದಿನ ವರ್ಷದ ಬಾಕಿ ಬಿಲ್ ಪಾವತಿ ಮಾಡದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಕಳೆದ ವರ್ಷದಲ್ಲಿ ಬಾಕಿ ಇರುವ ಬಿಲ್ ಮಾಡಿ ಖಜಾನೆಗೆ ಕಳಿಸಬೇಡಿ’ ಎಂದು ಅವರು ಕೋರಿದರು.</p>.<p>ಕಿತ್ತೂರು ತಾಲ್ಲೂಕು ಪಂಚಾಯ್ತಿ ಅಧಿಕಾರಿ ಕಿರಣ ಘೋರ್ಪಡೆ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ‘ಕಿತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬರುವ ಎಲ್ಲ ಶಾಲೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಕೈಯಲ್ಲಿ ನೀರಿನ ಬಿಂದಿಗೆ ಕಂಡರೆ ಅಂಥವರ ಮೇಲೆ ನಿರ್ದಾಕ್ಷಣ್ಯವಾಗಿ ಕೈಗೊಳ್ಳಲಾಗುವುದು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿರುವ ಎಲ್ಲ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಪೈಪುಗಳಲ್ಲಿ ಸೋರಿಕೆ ಉಂಟಾಗಿದ್ದರೆ ಕೂಡಲೇ ಸರಿಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಬೈಲಹೊಂಗಲ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ ಮಾತನಾಡಿ, ‘ಪ್ರತಿ ತಿಂಗಳು ಮೂರನೇ ಶನಿವಾರ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ನಾಲ್ಕನೆಯ ಶನಿವಾರ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಪಾಲಕರ ಸಭೆ ಕಡ್ಡಾಯವಾಗಿ ಕರೆಯಬೇಕು’ ಸೂಚಿಸಿದರು.</p>.<p>ಉಪ ಖಜಾನೆ ಇಲಾಖೆ ಅಧಿಕಾರಿ ಚಂದ್ರಶೇಖರ ನಡುವಿನಮನಿ ಮಾತನಾಡಿ, ‘ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಅಧಿಕಾರ ಹಂಚಿಕೆ ಮಾಡಿಕೊಡಬೇಕು. ಹಾಗೆ ಮಾಡಿದರೆ ನೌಕರರ ಸಂಬಳ ವಿಳಂಬವಾಗುವುದಿಲ್ಲ’ ಎಂದು ಮನವಿ ಮಾಡಿದರು.</p>.<p>‘ಕೆಲವು ದೊಡ್ಡ ಕಚೇರಿಗಳಲ್ಲಿ ಕೆಲವು ಅಧಿಕಾರಿಗಳು ಬಿಲ್ ಮಾಡುವ ಅಧಿಕಾರವನ್ನು ತಮ್ಮ ಹತ್ತಿರವೇ ಇಟ್ಟುಕೊಂಡಿದ್ದಾರೆ. ಇದರಿಂದ ಕೆಲವರ ಸಂಬಳ ಪಾವತಿ ಮಾಡುವುದು ತಡವಾಗುತ್ತಿದೆ’ ಎಂದು ಶಾಸಕ ಬಾಬಾಸಾಹೇಬ ಅವರ ಗಮನಕ್ಕೆ ತಂದರು.</p>.<p>‘ಹಿಂದಿನ ವರ್ಷದ ಬಾಕಿ ಬಿಲ್ ಪಾವತಿ ಮಾಡದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಕಳೆದ ವರ್ಷದಲ್ಲಿ ಬಾಕಿ ಇರುವ ಬಿಲ್ ಮಾಡಿ ಖಜಾನೆಗೆ ಕಳಿಸಬೇಡಿ’ ಎಂದು ಅವರು ಕೋರಿದರು.</p>.<p>ಕಿತ್ತೂರು ತಾಲ್ಲೂಕು ಪಂಚಾಯ್ತಿ ಅಧಿಕಾರಿ ಕಿರಣ ಘೋರ್ಪಡೆ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>