<p><strong>ಬೆಳಗಾವಿ</strong>: ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಬಿಂದನ್ ಪಾಟೀಲ ಅವರು, ಅಕ್ರಮಕ್ಕೆ ಬಳಸಿದ ಜೆಸಿಬಿ ಮೇಲೆ ಕಲ್ಲೆಸೆದಿದ್ದಾರೆ.</p>.<p>ಇದರ ವಿಡಿಯೊ ತುಣುಕುಗಳು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಅವರ ದಿಟ್ಟ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ.</p>.<p>ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಲ್ಯಾಟರೈಟ್ (ಸಿಮೆಂಟ್ ಉತ್ಪಾದನೆಗೆ ಬಳಸುವ ಪುಡಿಗಲ್ಲು) ತೆಗೆಯುತ್ತಿದ್ದರು. ಸ್ಥಳಕ್ಕೆ ಬಂದ ಬಿಂದನ್, ಗಣಿಗಾರಿಕೆ ನಿಲ್ಲಿಸಲು ತಾಕೀತು ಮಾಡಿದರು. ಆಗ ಸ್ಥಳದಲ್ಲಿದ್ದವರು ಅವರ ವಿರುದ್ಧ ಏರುಧ್ವನಿಯಲ್ಲಿ ಮಾತಾಡಲು ಶುರು ಮಾಡಿದರು. ರಾಜಕೀಯ ವ್ಯಕ್ತಿಗಳ ಹೆಸರು ಬಳಸಿಕೊಂಡು ಗಣಿಗಾರಿಕೆ ಮುಂದುವರಿಸಿದರು.</p>.<p>ಸಿಟ್ಟಿಗೆದ್ದ ಬಿಂದನ್ ಅವರು ಅಂಗೈ ಗಾತ್ರದ ಕಲ್ಲುಗಳನ್ನು ಜೆಸಿಬಿಗೆ ಎಸೆದರು. ಅದರ ಗಾಜು ಪುಡಿಪುಡಿಯಾದವು. ಗಣಿಗಾರಿಕೆ ನಡೆಸಿದ ಆರೋಪಿಗಳೇ ಅಧಿಕಾರಿಯ ತೇಜೋವಧೆಗೆ ಇದರ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಆದರೆ, ಈ ವಿಡಿಯೊ ಸಾಕಷ್ಟು ಸಂಚಲನ ಮೂಡಿಸಿದ್ದು, ಜನರಿಂದ ಪ್ರಶಂಸೆಗಳ ಸುರಿಮಳೆ ಬಂದಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಬಿಂದನ್, ‘ಇದು ತಿಂಗಳ ಹಿಂದೆ ನಡೆದ ಘಟನೆ. ಸಾಕಷ್ಟು ಎಚ್ಚರಿಕೆ ನೀಡಿದರೂ ಅವರು ಸ್ಥಳದಿಂದ ಕದಲಲಿಲ್ಲ. ಹೀಗಾಗಿ, ಶಿಸ್ತುಕ್ರಮ ವಹಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಇನಾಂ ಬಡಸ್ ಗ್ರಾಮದ ಸರಹದ್ದಿನಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಬಿಂದನ್ ಪಾಟೀಲ ಅವರು, ಅಕ್ರಮಕ್ಕೆ ಬಳಸಿದ ಜೆಸಿಬಿ ಮೇಲೆ ಕಲ್ಲೆಸೆದಿದ್ದಾರೆ.</p>.<p>ಇದರ ವಿಡಿಯೊ ತುಣುಕುಗಳು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಅವರ ದಿಟ್ಟ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ.</p>.<p>ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಲ್ಯಾಟರೈಟ್ (ಸಿಮೆಂಟ್ ಉತ್ಪಾದನೆಗೆ ಬಳಸುವ ಪುಡಿಗಲ್ಲು) ತೆಗೆಯುತ್ತಿದ್ದರು. ಸ್ಥಳಕ್ಕೆ ಬಂದ ಬಿಂದನ್, ಗಣಿಗಾರಿಕೆ ನಿಲ್ಲಿಸಲು ತಾಕೀತು ಮಾಡಿದರು. ಆಗ ಸ್ಥಳದಲ್ಲಿದ್ದವರು ಅವರ ವಿರುದ್ಧ ಏರುಧ್ವನಿಯಲ್ಲಿ ಮಾತಾಡಲು ಶುರು ಮಾಡಿದರು. ರಾಜಕೀಯ ವ್ಯಕ್ತಿಗಳ ಹೆಸರು ಬಳಸಿಕೊಂಡು ಗಣಿಗಾರಿಕೆ ಮುಂದುವರಿಸಿದರು.</p>.<p>ಸಿಟ್ಟಿಗೆದ್ದ ಬಿಂದನ್ ಅವರು ಅಂಗೈ ಗಾತ್ರದ ಕಲ್ಲುಗಳನ್ನು ಜೆಸಿಬಿಗೆ ಎಸೆದರು. ಅದರ ಗಾಜು ಪುಡಿಪುಡಿಯಾದವು. ಗಣಿಗಾರಿಕೆ ನಡೆಸಿದ ಆರೋಪಿಗಳೇ ಅಧಿಕಾರಿಯ ತೇಜೋವಧೆಗೆ ಇದರ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಆದರೆ, ಈ ವಿಡಿಯೊ ಸಾಕಷ್ಟು ಸಂಚಲನ ಮೂಡಿಸಿದ್ದು, ಜನರಿಂದ ಪ್ರಶಂಸೆಗಳ ಸುರಿಮಳೆ ಬಂದಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಬಿಂದನ್, ‘ಇದು ತಿಂಗಳ ಹಿಂದೆ ನಡೆದ ಘಟನೆ. ಸಾಕಷ್ಟು ಎಚ್ಚರಿಕೆ ನೀಡಿದರೂ ಅವರು ಸ್ಥಳದಿಂದ ಕದಲಲಿಲ್ಲ. ಹೀಗಾಗಿ, ಶಿಸ್ತುಕ್ರಮ ವಹಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>