‘ಪೊಲೀಸ್ ಠಾಣೆಗೆ ದೂರು ನೀಡಲು ಬರುವವರು ನೊಂದಿರುತ್ತಾರೆ. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಧೈರ್ಯ ಹೇಳಬೇಕು. ಹಳ್ಳಿಗಳಲ್ಲಿ ಅಪರಾಧ ನಿಯಂತ್ರಣ ಕಾರ್ಯ ಚುರುಕುಗೊಳಿಸಲು ಬೀಟ್ ವ್ಯವಸ್ಥೆ ಹೆಚ್ಚಿಸಬೇಕು. ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ಮೇಲಿಂದ ಮೇಲೆ ಸಭೆಗಳನ್ನು ಮಾಡಿ, ಕಾನೂನು ಬಾಹಿರ ಕೃತ್ಯಗಳು ಎಲ್ಲಿ ಹೆಚ್ಚಾಗಿವೆ, ಹೇಗೆ ನಿಯಂತ್ರಿಸಬೇಕು ಎಂಬ ಚರ್ಚೆ ಮಾಡಬೇಕು’ ಎಂದು ಸಲಹೆ ನೀಡಿದರು.