<p><strong>ಬೆಳಗಾವಿ: </strong>‘ಮುಂಬರುವ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ನಿಯಮಗಳು ಉಲ್ಲಂಘನೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ದಕ್ಷಿಣ ಹಾಗೂ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಹಾಗೂ ವಿವಿಧ ತಂಡಗಳಿಗೆನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮತದಾನ ಕೇಂದ್ರದಲ್ಲಿರುವ ಕುಡಿಯುವ ನೀರಿನ ವ್ಯವಸ್ಥೆ, ವಾತಾವರಣ, ವಸತಿ ವ್ಯವಸ್ಥೆಗಳ ಬಗ್ಗೆ ಪ್ರಾಥಮಿಕ ಹಂತದ ವರದಿ ಸಲ್ಲಿಸಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿ, ಮತದಾನ ಕೇಂದ್ರಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಚುನಾವಣಾ ತರಬೇತುದಾರ ರವಿ ಕರಲಿಂಗಣ್ಣವರ ಸೂಚಿಸಿದರು.</p>.<p>‘ಮತಗಟ್ಟೆಗಳಲ್ಲಿ ಇಂಟರ್ನೆಟ್ ಲಭ್ಯತೆ ಬಗ್ಗೆ ಗಮನಹರಿಸಬೇಕು.ಸಾರಿಗೆ ವ್ಯವಸ್ಥೆ ಇದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಮತದಾರರ ಪಟ್ಟಿಯನ್ನು ಮುಂಚಿತವಾಗಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ವಿದ್ಯುನ್ಮಾನ ಮತಯಂತ್ರ ಬಳಸಿ, ಮತ ಚಲಾಯಿಸುವ ಕುರಿತು ಮತದಾರರಿಗೆ ಪ್ರಾತ್ಯಕ್ಷಿಕೆ ತೋರಿಸಬೇಕು’ ಎಂದರು.</p>.<p>‘ನೀತಿಸಂಹಿತೆ ಜಾರಿ ನಂತರ ಕ್ಷೇತ್ರದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳು, ಸಭೆಗಳು ಜರುಗದಂತೆ ನೋಡಿಕೊಳ್ಳಬೇಕು. ದಿನಾಂಕ ನಿಗದಿಯಾದ ನಂತರ 4 ದಿನ ಮುಂಚಿತವಾಗಿ ಮತದಾನಕ್ಕೆ ಬೇಕಾಗಿರುವ ಎಲ್ಲ ಪರಿಕರಗಳ ವ್ಯವಸ್ಥೆಯ ಕುರಿತು ವರದಿ ಸಲ್ಲಿಸಬೇಕು. ವಲಯ ಚುನಾವಣಾ ಅಧಿಕಾರಿಗಳು ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾನವ ಸಂಪನ್ಮೂಲ ಇಲಾಖೆಗಳ ಜೊತೆ ಸಹಕರಿಸಬೇಕು’ ಎಂದು ಸೂಚಿಸಿದರು.</p>.<p>‘ಫ್ಲೈಯಿಂಗ್ ಸ್ಕ್ವಾಡ್ಗಳು ಚುನಾವಣೆ ಸಮಯದಲ್ಲಿ ಮತ ಪಡೆಯಲು ನೀಡುವ ಆಮಿಷಗಳಾದ ಹಣ, ವಸ್ತುಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಬೇಕು. ಸ್ಟ್ಯಾಟಿಕ್ ಸರ್ವೇಲನ್ಸ್ ಟೀಮ್ (ಸ್ಥಾನಿಕ ನಿಗ್ರಹ ದಳ) ಎಲ್ಲ ಚೆಕ್ಪೋಸ್ಟ್ಗಳ ಮೇಲೆ ಕಣ್ಗಾವಲು ಇಟ್ಟಿರಬೇಕು’ ಎಂದರು.</p>.<p>ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕರ, ನೋಡಲ್ ಅಧಿಕಾರಿಗಳಾದ ಪ್ರೀತಂ ನಸಲಾಪುರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಮುಂಬರುವ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ನಿಯಮಗಳು ಉಲ್ಲಂಘನೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ದಕ್ಷಿಣ ಹಾಗೂ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಹಾಗೂ ವಿವಿಧ ತಂಡಗಳಿಗೆನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಮತದಾನ ಕೇಂದ್ರದಲ್ಲಿರುವ ಕುಡಿಯುವ ನೀರಿನ ವ್ಯವಸ್ಥೆ, ವಾತಾವರಣ, ವಸತಿ ವ್ಯವಸ್ಥೆಗಳ ಬಗ್ಗೆ ಪ್ರಾಥಮಿಕ ಹಂತದ ವರದಿ ಸಲ್ಲಿಸಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿ, ಮತದಾನ ಕೇಂದ್ರಗಳಿಗೆ ಸಂಬಂಧಿಸಿದಂತೆ ಕುಂದು ಕೊರತೆಗಳನ್ನು ಸರಿಪಡಿಸಿಕೊಳ್ಳಬೇಕು’ ಎಂದು ಚುನಾವಣಾ ತರಬೇತುದಾರ ರವಿ ಕರಲಿಂಗಣ್ಣವರ ಸೂಚಿಸಿದರು.</p>.<p>‘ಮತಗಟ್ಟೆಗಳಲ್ಲಿ ಇಂಟರ್ನೆಟ್ ಲಭ್ಯತೆ ಬಗ್ಗೆ ಗಮನಹರಿಸಬೇಕು.ಸಾರಿಗೆ ವ್ಯವಸ್ಥೆ ಇದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಮತದಾರರ ಪಟ್ಟಿಯನ್ನು ಮುಂಚಿತವಾಗಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ವಿದ್ಯುನ್ಮಾನ ಮತಯಂತ್ರ ಬಳಸಿ, ಮತ ಚಲಾಯಿಸುವ ಕುರಿತು ಮತದಾರರಿಗೆ ಪ್ರಾತ್ಯಕ್ಷಿಕೆ ತೋರಿಸಬೇಕು’ ಎಂದರು.</p>.<p>‘ನೀತಿಸಂಹಿತೆ ಜಾರಿ ನಂತರ ಕ್ಷೇತ್ರದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳು, ಸಭೆಗಳು ಜರುಗದಂತೆ ನೋಡಿಕೊಳ್ಳಬೇಕು. ದಿನಾಂಕ ನಿಗದಿಯಾದ ನಂತರ 4 ದಿನ ಮುಂಚಿತವಾಗಿ ಮತದಾನಕ್ಕೆ ಬೇಕಾಗಿರುವ ಎಲ್ಲ ಪರಿಕರಗಳ ವ್ಯವಸ್ಥೆಯ ಕುರಿತು ವರದಿ ಸಲ್ಲಿಸಬೇಕು. ವಲಯ ಚುನಾವಣಾ ಅಧಿಕಾರಿಗಳು ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾನವ ಸಂಪನ್ಮೂಲ ಇಲಾಖೆಗಳ ಜೊತೆ ಸಹಕರಿಸಬೇಕು’ ಎಂದು ಸೂಚಿಸಿದರು.</p>.<p>‘ಫ್ಲೈಯಿಂಗ್ ಸ್ಕ್ವಾಡ್ಗಳು ಚುನಾವಣೆ ಸಮಯದಲ್ಲಿ ಮತ ಪಡೆಯಲು ನೀಡುವ ಆಮಿಷಗಳಾದ ಹಣ, ವಸ್ತುಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಬೇಕು. ಸ್ಟ್ಯಾಟಿಕ್ ಸರ್ವೇಲನ್ಸ್ ಟೀಮ್ (ಸ್ಥಾನಿಕ ನಿಗ್ರಹ ದಳ) ಎಲ್ಲ ಚೆಕ್ಪೋಸ್ಟ್ಗಳ ಮೇಲೆ ಕಣ್ಗಾವಲು ಇಟ್ಟಿರಬೇಕು’ ಎಂದರು.</p>.<p>ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕರ, ನೋಡಲ್ ಅಧಿಕಾರಿಗಳಾದ ಪ್ರೀತಂ ನಸಲಾಪುರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>