<p><strong>ಖಾನಾಪುರ</strong>: ‘ಯೋಗದ ಮಹತ್ವ ಇಂದು ಇಡೀ ಜಗತ್ತಿಗೆ ಅರ್ಥವಾಗಿದೆ. ಜಗತ್ತಿನಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಯೋಗದತ್ತ ಜನರು ಆಕರ್ಷಿತರಾಗುತ್ತಿದ್ದಾರೆ. ಇದರೊಂದಿಗೆ ಯೋಗ ದಿನ ವಿಶ್ವದಾದ್ಯಂತ ಹೊಸ ದಾಖಲೆ ಸೃಷ್ಟಿಸಿದೆ’ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.</p>.<p>ತಾಲ್ಲೂಕಿನ ತೋಪಿನಕಟ್ಟಿ ಗ್ರಾಮದ ಅಮೃತ ಸರೋವರದ ಆವರಣದಲ್ಲಿ ಶುಕ್ರವಾರ ಖಾನಾಪುರ ತಾಲ್ಲೂಕು ಪಂಚಾಯ್ತಿ ಹಾಗೂ ತೋಪಿನಕಟ್ಟಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದಿನನಿತ್ಯದ ಒತ್ತಡದ ಜೀವನದ ನಡುವೆ ನಿಯಮಿತ ಯೋಗಾಭ್ಯಾಸ ಅನುಸರಿಸುವುದರಿಂದ ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಹೊಂದಬಹುದು. ದೇಹದ ಶುದ್ಧೀಕರಣ ಹಾಗೂ ಸದೃಢತೆಗೆ ಯೋಗಾಭ್ಯಾಸ ರಾಮಬಾಣ’ ಎಂದು ಅವರು ವಿವರಿಸಿದರು.</p>.<p>ಕಾರ್ಯಕ್ರಮದ ನೆನಪಿಗಾಗಿ ಶಾಸಕ ಹಲಗೇಕರ ದಂಪತಿ ತೋಪಿನಕಟ್ಟಿಯ ಅಮೃತ ಸರೋವರದ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು.</p>.<p>ತಾ.ಪಂ. ಇಒ ವೀರನಗೌಡ ಏಗನಗೌಡರ ನೇತೃತ್ವದಲ್ಲಿ ತೋಪಿನಕಟ್ಟಿ ಗ್ರಾಮದ ಸಿದ್ದಾಶ್ರಮ ಮಠದ ಸಭಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಜರುಗಿತು. ನರೇಗಾ ಕೂಲಿಕಾರರು, ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಾಮೂಹಿಕ ಯೋಗ ಪ್ರದರ್ಶಿಸಿದರು.</p>.<p>ಗ್ರಾಮದ ಸಿದ್ಧಾಶ್ರಮ ಮಠದ ರಾಮದಾಸ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಪಿಡಿಒ ರಾಜಾರಾಮ ಹಲಗೇಕರ ಸ್ವಾಗತಿಸಿದರು. ಕಾರ್ಯದರ್ಶಿ ರಘುನಾಥ ದೇಸಾಯಿ ಕಾರ್ಯಕ್ರಮ ನಿರ್ವಹಿಸಿದರು. ಐಇಸಿ ಸಂಯೋಜಕ ಮಹಾಂತೇಶ ಜಾಂಗಟಿ ವಂದಿಸಿದರು.</p>.<p>ಅಮೃತ ಸರೋವರಗಳ ಆವರಣ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ಸರೋವರಗಳ ಆವರಣದಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ‘ಯೋಗದ ಮಹತ್ವ ಇಂದು ಇಡೀ ಜಗತ್ತಿಗೆ ಅರ್ಥವಾಗಿದೆ. ಜಗತ್ತಿನಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಯೋಗದತ್ತ ಜನರು ಆಕರ್ಷಿತರಾಗುತ್ತಿದ್ದಾರೆ. ಇದರೊಂದಿಗೆ ಯೋಗ ದಿನ ವಿಶ್ವದಾದ್ಯಂತ ಹೊಸ ದಾಖಲೆ ಸೃಷ್ಟಿಸಿದೆ’ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.</p>.<p>ತಾಲ್ಲೂಕಿನ ತೋಪಿನಕಟ್ಟಿ ಗ್ರಾಮದ ಅಮೃತ ಸರೋವರದ ಆವರಣದಲ್ಲಿ ಶುಕ್ರವಾರ ಖಾನಾಪುರ ತಾಲ್ಲೂಕು ಪಂಚಾಯ್ತಿ ಹಾಗೂ ತೋಪಿನಕಟ್ಟಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದಿನನಿತ್ಯದ ಒತ್ತಡದ ಜೀವನದ ನಡುವೆ ನಿಯಮಿತ ಯೋಗಾಭ್ಯಾಸ ಅನುಸರಿಸುವುದರಿಂದ ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಹೊಂದಬಹುದು. ದೇಹದ ಶುದ್ಧೀಕರಣ ಹಾಗೂ ಸದೃಢತೆಗೆ ಯೋಗಾಭ್ಯಾಸ ರಾಮಬಾಣ’ ಎಂದು ಅವರು ವಿವರಿಸಿದರು.</p>.<p>ಕಾರ್ಯಕ್ರಮದ ನೆನಪಿಗಾಗಿ ಶಾಸಕ ಹಲಗೇಕರ ದಂಪತಿ ತೋಪಿನಕಟ್ಟಿಯ ಅಮೃತ ಸರೋವರದ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು.</p>.<p>ತಾ.ಪಂ. ಇಒ ವೀರನಗೌಡ ಏಗನಗೌಡರ ನೇತೃತ್ವದಲ್ಲಿ ತೋಪಿನಕಟ್ಟಿ ಗ್ರಾಮದ ಸಿದ್ದಾಶ್ರಮ ಮಠದ ಸಭಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಜರುಗಿತು. ನರೇಗಾ ಕೂಲಿಕಾರರು, ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಾಮೂಹಿಕ ಯೋಗ ಪ್ರದರ್ಶಿಸಿದರು.</p>.<p>ಗ್ರಾಮದ ಸಿದ್ಧಾಶ್ರಮ ಮಠದ ರಾಮದಾಸ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಪಿಡಿಒ ರಾಜಾರಾಮ ಹಲಗೇಕರ ಸ್ವಾಗತಿಸಿದರು. ಕಾರ್ಯದರ್ಶಿ ರಘುನಾಥ ದೇಸಾಯಿ ಕಾರ್ಯಕ್ರಮ ನಿರ್ವಹಿಸಿದರು. ಐಇಸಿ ಸಂಯೋಜಕ ಮಹಾಂತೇಶ ಜಾಂಗಟಿ ವಂದಿಸಿದರು.</p>.<p>ಅಮೃತ ಸರೋವರಗಳ ಆವರಣ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ಸರೋವರಗಳ ಆವರಣದಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>