<p><strong>ಗೋಕಾಕ: ‘</strong>ಸಹಕಾರಿ ಸಂಸ್ಥೆಯ ಶ್ರೇಯಸ್ಸು ಸಂಸ್ಥೆಯ ಆಡಳಿತ ಮಂಡಳಿಯ ಒಗ್ಗಟ್ಟನ್ನು ಅವಲಂಭಿಸಿದ್ದು, ತನ್ನ 42ನೇ ಶಾಖೆಯನ್ನು ಇಲ್ಲಿ ಆರಂಭಿಸಿರುವ ಬೋರಗಾಂವ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಯು ಗೋಕಾಕ ಮತ್ತು ಸುತ್ತಮುತ್ತಲಿನ ಜನರ ಸೇವೆಗೆ ಮುಂದಾಗಿರುವುದು ಸ್ವಾಗತಾರ್ಹ’ ಎಂದು ಕಾಂಗ್ರೆಸ್ ಮುಖಂಡ ಹಿರಿಯ ಸಹಕಾರಿ ಅಶೋಕ ಪೂಜಾರಿ ಹೇಳಿದರು.</p>.<p>ಶನಿವಾರ ಇಲ್ಲಿನ ರವಿವಾರ ಪೇಟೆಯ ರಾಠೋಡ ಕಟ್ಟಡದಲ್ಲಿ ನೂತನವಾಗಿ ಆರಂಭವಾದ ಬೋರಗಾಂವ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸೈಟಿಯ 42ನೇ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ನೂತನ ಸಹಕಾರಿಯ ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ತಾತ್ಯಾಸೋ ರಾಜಗೊಂಡಾ ಪಾಟೀಲ ಮಾತನಾಡಿ, ‘ನೂತನ ಶಾಖೆಯಿಂದ ಸಾರ್ವಜನಿಕರು, ಗ್ರಾಹಕರಿಗೆ ನೆಟ್ ಬ್ಯಾಂಕಿಂಗ್ ಸೇವೆಯಲ್ಲದೇ ವ್ಯಾಪಾರ-ವಹಿವಾಟು ಸಾಲ, ಬಂಗಾರ ಅಡಮಾನ ಸಾಲ, ನಿವೇಶನ ಖರೀದಿಗೆ ಸಾಲ, ಮನೆ ನಿರ್ಮಾಣಕ್ಕೆ ಸಾಲ, ವಾಹನ ಖರೀದಿಗೆ ಸಾಲ ಹೀಗೆ ಇನ್ನೂ ಅನೇಕ ಬಗೆಯ ಸಾಲ ಸೌಲಭ್ಯ ಮತ್ತು ಠೇವುಗಳ ಮೇಲೆ ಆಕರ್ಷಕ ಬಡ್ಡಿ ನೀಡಲಾಗುತ್ತದೆ’ ಎಂದರು.</p>.<p>ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳರದ ನಿರ್ದೇಶಕರಾದ ಸಂಜಯ ಹೊಸಮಠ ಮತ್ತು ತಮ್ಮಣ್ಣಾ ಕೆಂಚರಡ್ಡಿ, ಬಾಳಯ್ಯ ಕಂಬಿ, ಮಹಾಂತೇಶ ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.</p>.<p>ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರೋಹಣ ಪಾರ್ಖೇ, ಶಾಖಾ ಪ್ರಬಂಧಕ ಉದಯಕುಮಾರ ದಾನವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ: ‘</strong>ಸಹಕಾರಿ ಸಂಸ್ಥೆಯ ಶ್ರೇಯಸ್ಸು ಸಂಸ್ಥೆಯ ಆಡಳಿತ ಮಂಡಳಿಯ ಒಗ್ಗಟ್ಟನ್ನು ಅವಲಂಭಿಸಿದ್ದು, ತನ್ನ 42ನೇ ಶಾಖೆಯನ್ನು ಇಲ್ಲಿ ಆರಂಭಿಸಿರುವ ಬೋರಗಾಂವ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿಯು ಗೋಕಾಕ ಮತ್ತು ಸುತ್ತಮುತ್ತಲಿನ ಜನರ ಸೇವೆಗೆ ಮುಂದಾಗಿರುವುದು ಸ್ವಾಗತಾರ್ಹ’ ಎಂದು ಕಾಂಗ್ರೆಸ್ ಮುಖಂಡ ಹಿರಿಯ ಸಹಕಾರಿ ಅಶೋಕ ಪೂಜಾರಿ ಹೇಳಿದರು.</p>.<p>ಶನಿವಾರ ಇಲ್ಲಿನ ರವಿವಾರ ಪೇಟೆಯ ರಾಠೋಡ ಕಟ್ಟಡದಲ್ಲಿ ನೂತನವಾಗಿ ಆರಂಭವಾದ ಬೋರಗಾಂವ ಅರ್ಬನ್ ಕೊ-ಆಪ್ ಕ್ರೆಡಿಟ್ ಸೊಸೈಟಿಯ 42ನೇ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ನೂತನ ಸಹಕಾರಿಯ ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ತಾತ್ಯಾಸೋ ರಾಜಗೊಂಡಾ ಪಾಟೀಲ ಮಾತನಾಡಿ, ‘ನೂತನ ಶಾಖೆಯಿಂದ ಸಾರ್ವಜನಿಕರು, ಗ್ರಾಹಕರಿಗೆ ನೆಟ್ ಬ್ಯಾಂಕಿಂಗ್ ಸೇವೆಯಲ್ಲದೇ ವ್ಯಾಪಾರ-ವಹಿವಾಟು ಸಾಲ, ಬಂಗಾರ ಅಡಮಾನ ಸಾಲ, ನಿವೇಶನ ಖರೀದಿಗೆ ಸಾಲ, ಮನೆ ನಿರ್ಮಾಣಕ್ಕೆ ಸಾಲ, ವಾಹನ ಖರೀದಿಗೆ ಸಾಲ ಹೀಗೆ ಇನ್ನೂ ಅನೇಕ ಬಗೆಯ ಸಾಲ ಸೌಲಭ್ಯ ಮತ್ತು ಠೇವುಗಳ ಮೇಲೆ ಆಕರ್ಷಕ ಬಡ್ಡಿ ನೀಡಲಾಗುತ್ತದೆ’ ಎಂದರು.</p>.<p>ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳರದ ನಿರ್ದೇಶಕರಾದ ಸಂಜಯ ಹೊಸಮಠ ಮತ್ತು ತಮ್ಮಣ್ಣಾ ಕೆಂಚರಡ್ಡಿ, ಬಾಳಯ್ಯ ಕಂಬಿ, ಮಹಾಂತೇಶ ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.</p>.<p>ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರೋಹಣ ಪಾರ್ಖೇ, ಶಾಖಾ ಪ್ರಬಂಧಕ ಉದಯಕುಮಾರ ದಾನವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>