ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತಿವೆ. ಅವುಗಳಿಗೆ ಸ್ವಾತಂತ್ರ್ಯ ನಂತರ ಅನುದಾನ ನೀಡುತ್ತಾ ಬರಲಾಗಿತ್ತು. ಆದರೆ, 1986ರಲ್ಲಿ ನಿಲ್ಲಿಸಲಾಗಿತ್ತು. 2006ರಲ್ಲಿ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಅವರು, ಹೋರಾಟಕ್ಕೆ ಮಣಿದು 1986ರಿಂದ 1993ರವರೆಗೆ ಅನುದಾನ ನೀಡಿದ್ದರು. 2008ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು 1986ರಿಂದ 1993ರವರೆಗೆ ಕನ್ನಡ ಮಾಧ್ಯಮ ಶಾಲಾ–ಕಾಲೇಜುಗಳಿಗೆ ಅನುದಾನ ಕಲ್ಪಿಸಿತ್ತು. ನಂತರ ಬಂದ ಸರ್ಕಾರಗಳು 1995ರ ನಂತರ ಪ್ರಾರಂಭವಾದ ಅನುದಾನರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸದೇ ಇರುವುದು ಕನ್ನಡ ಭಾಷೆಗೆ ಮಾಡಿದ ಅವಮಾನವಾಗಿದೆ’ ಎಂದು ಆರೋಪಿಸಿದರು.