ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಬರುತ್ತಿರುವ 1.21 ಲಕ್ಷ ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.