<p><strong>ಬೆಳಗಾವಿ</strong>: ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಹೋರಾಟದ ನೆನಪು ಮಾಡಿಕೊಡುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಮಹಾತ್ಮಗಾಂಧಿ ದಂಡಿ ಯಾತ್ರೆ ಶುರು ಮಾಡಿದ ದಿನದ ಸ್ಮರಣೆ, ಇಡೀ ದೇಶದಲ್ಲಿ 75 ವಾರಗಳವರೆಗೆ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಅನೇಕರ ತ್ಯಾಗ, ಬಲಿದಾನದಿಂದ ದೇಶ ಸ್ವಾತಂತ್ರ್ಯ ಪಡೆದಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಾಗಿದೆ. ಈ ಕಾರ್ಯಕ್ರಮ ಜನಾಂದೋಲನ ಆಗಬೇಕು ಎನ್ನುವುದು ಮೋದಿ ಅವರ ಕನಸಾಗಿದೆ. ಮುಂದೇನು ಸಾಧಿಸಬೇಕು ಎನ್ನುವುದನ್ನು ಯೋಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.</p>.<p>ಕಿತ್ತೂರು ರಾಣಿ ಚನ್ನಮ್ಮ ಮೊದಲಿಗೆ ಬ್ರಿಟಿಷರ ವಿರುದ್ಧ ಹೋರಾಟ ಶುರು ಮಾಡಿದರು. ಸಂಗೊಳ್ಳಿರಾಯಣ್ಣ ಹಾಗೂ ಅಮಟೂರು ಬಾಳಪ್ಪ ಅವರ ಪುಣ್ಯಭೂಮಿ ಇದು ಎಂದರು.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಬಹಳಷ್ಟಿದೆ. ಉತ್ತರ ಕರ್ನಾಟಕದಲ್ಲೂ ಸ್ವಾತಂತ್ರ್ಯದ ಕಿಚ್ಚು ಹಚ್ಚಿದವರು ಬಹಳಷ್ಟು ಮಂದಿ ಇದ್ದಾರೆ.</p>.<p>ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ. ಸಿಂಹ ಓಡುವಾಗ ಹಿಂದೆ ನೋಡಿಕೊಳ್ಳುವಂತೆ ಸಿಂಹಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರು ಸಂತೋಷ ಪಡುವಂತೆ ಆಗಬೇಕು; ಅವರಿಗೆ ಹೆಮ್ಮೆ ಮೂಡಿಸಬೇಕು ಎಂದು ತಿಳಿಸಿದರು.</p>.<p>ಸ್ವಾತಂತ್ರ್ಯ ಸಿಗದಿರುವ ಕ್ಷೇತ್ರಗಳಲ್ಲಿ ಸ್ವಾತಂತ್ರ್ಯ ಪಡೆಯಲು ಹೋರಾಟ ಹಾಗೂ ಚಿಂತನೆಯನ್ನು ನಾವು ಮಾಡಬೇಕಾಗಿದೆ ಎಂದರು. ತಾಲ್ಲೂಕು, ಗ್ರಾಮಗಳಲ್ಲಿ ಪ್ರತಿ ವಾರ ಕಾರ್ಯಕ್ರಮ ಮಾಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಮರಳಿ ತರುವುದು ಮೊದಲಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಬೇಕಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕಿತ್ತೂರು ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಜೆಟ್ ನಲ್ಲಿ ₹50 ಕೋಟಿ ನೀಡಲಾಗಿದೆ ಎಂದು ಹೇಳಿದರು.</p>.<p>ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಮಹಾಂತೇಶ ದೊಡ್ಡಗೌಡರ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಹೇಗೆ ಬಳಸಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಹೋರಾಟದ ನೆನಪು ಮಾಡಿಕೊಡುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಮಹಾತ್ಮಗಾಂಧಿ ದಂಡಿ ಯಾತ್ರೆ ಶುರು ಮಾಡಿದ ದಿನದ ಸ್ಮರಣೆ, ಇಡೀ ದೇಶದಲ್ಲಿ 75 ವಾರಗಳವರೆಗೆ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಅನೇಕರ ತ್ಯಾಗ, ಬಲಿದಾನದಿಂದ ದೇಶ ಸ್ವಾತಂತ್ರ್ಯ ಪಡೆದಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಾಗಿದೆ. ಈ ಕಾರ್ಯಕ್ರಮ ಜನಾಂದೋಲನ ಆಗಬೇಕು ಎನ್ನುವುದು ಮೋದಿ ಅವರ ಕನಸಾಗಿದೆ. ಮುಂದೇನು ಸಾಧಿಸಬೇಕು ಎನ್ನುವುದನ್ನು ಯೋಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.</p>.<p>ಕಿತ್ತೂರು ರಾಣಿ ಚನ್ನಮ್ಮ ಮೊದಲಿಗೆ ಬ್ರಿಟಿಷರ ವಿರುದ್ಧ ಹೋರಾಟ ಶುರು ಮಾಡಿದರು. ಸಂಗೊಳ್ಳಿರಾಯಣ್ಣ ಹಾಗೂ ಅಮಟೂರು ಬಾಳಪ್ಪ ಅವರ ಪುಣ್ಯಭೂಮಿ ಇದು ಎಂದರು.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಬಹಳಷ್ಟಿದೆ. ಉತ್ತರ ಕರ್ನಾಟಕದಲ್ಲೂ ಸ್ವಾತಂತ್ರ್ಯದ ಕಿಚ್ಚು ಹಚ್ಚಿದವರು ಬಹಳಷ್ಟು ಮಂದಿ ಇದ್ದಾರೆ.</p>.<p>ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ. ಸಿಂಹ ಓಡುವಾಗ ಹಿಂದೆ ನೋಡಿಕೊಳ್ಳುವಂತೆ ಸಿಂಹಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರು ಸಂತೋಷ ಪಡುವಂತೆ ಆಗಬೇಕು; ಅವರಿಗೆ ಹೆಮ್ಮೆ ಮೂಡಿಸಬೇಕು ಎಂದು ತಿಳಿಸಿದರು.</p>.<p>ಸ್ವಾತಂತ್ರ್ಯ ಸಿಗದಿರುವ ಕ್ಷೇತ್ರಗಳಲ್ಲಿ ಸ್ವಾತಂತ್ರ್ಯ ಪಡೆಯಲು ಹೋರಾಟ ಹಾಗೂ ಚಿಂತನೆಯನ್ನು ನಾವು ಮಾಡಬೇಕಾಗಿದೆ ಎಂದರು. ತಾಲ್ಲೂಕು, ಗ್ರಾಮಗಳಲ್ಲಿ ಪ್ರತಿ ವಾರ ಕಾರ್ಯಕ್ರಮ ಮಾಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಮರಳಿ ತರುವುದು ಮೊದಲಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಬೇಕಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.</p>.<p>ಕಿತ್ತೂರು ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಜೆಟ್ ನಲ್ಲಿ ₹50 ಕೋಟಿ ನೀಡಲಾಗಿದೆ ಎಂದು ಹೇಳಿದರು.</p>.<p>ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ಮಹಾಂತೇಶ ದೊಡ್ಡಗೌಡರ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>