ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದ ಪ್ರಗತಿಗೆ ಆರ್ಥಿಕ ಸದೃಢತೆಯೇ ಮಾಪನ’

Last Updated 15 ಆಗಸ್ಟ್ 2020, 13:39 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮಾತನಾಡಿ, ‘ದೇಶ ದಾಸ್ಯದಿಂದ ಬಿಡುಗಡೆ ಹೊಂದಲು ಅನೇಕ ದೇಶ ಭಕ್ತರ ತ್ಯಾಗ, ಬಲಿ ದಾನ ಇದೆ. ಇಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿರಾಯಣ್ಣ, ಬೆಳವಡಿ ಮಲ್ಲಮ್ಮ ಮೊದಲಾದವರನ್ನು ಸ್ಮರಿಸಬೇಕು’ ಎಂದರು.

‘ದೇಶದ ಪ್ರಗತಿಗೆ ಆರ್ಥಿಕ ಸದೃಢತೆಯೇ ಮಾಪನವಾಗಿದೆ’ ಎಂದರು.

‘ವಿಶ್ವವಿದ್ಯಾಲಯದ 316 ಎನ್‌ಎಸ್‌ಎಸ್ ಘಟಕಗಳು ಕೋವಿಡ್ 19 ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿವೆ’ ಎಂದು ತಿಳಿಸಿದರು.

ಕುಲಸಚಿವರಾದ ಪ್ರೊ.ಬಸವರಾಜ ಪದ್ಮಶಾಲಿ, ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. ಪಾಟೀಲ ಇದ್ದರು.

ಡಾ.ನಂದಿನಿ ದೇವರಮನಿ ನಿರೂಪಿಸಿದರು. ಎನ್‌ಎಸ್‌ಎಸ್‌ಸ ಸಂಯೋಜನಾಧಿಕಾರಿ ಪ್ರೊ.ಬಿ.ಎಸ್. ನಾವಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT