ರಾಣಿ ಚನ್ನಮ್ಮನ ಸಮಾಧಿ ಸ್ಥಳದಿಂದ ಆರಂಭವಾದ ತಿರಂಗಾ ಯಾತ್ರೆಗೆ ಶಾಖಾ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಚಾಲನೆ ನೀಡಿದರು. ಬಟ್ಟನ್ ಕೂಟ, ಮಾರುತಿ ದೇವಸ್ಥಾನ, ಇಂಚಲ ಕ್ರಾಸ್, ಬಸ್ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗವಾಗಿ ಗಣಾಚಾರಿ ಶಿಕ್ಷಣ ಸಂಸ್ಥೆಗೆ ಬಂದು ತಲುಪಿತು. ದಾರಿಯುದ್ದಕ್ಕೂ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೈ ಘೋಷ ಮೊಳಗಿಸಿದರು.