<p><strong>ಸಂಕೇಶ್ವರ</strong>: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಅನೇಕ ಜನೋಪಯೋಗಿ ಯೋಜನೆಗಳಿದ್ದು, ಅವುಗಳ ಕುರಿತು ಗ್ರಾಮೀಣ ಜನರಿಗೆ ತಿಳಿವಳಿಕೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಅಧಿಕಾರಿಗಳು ಮಾಡಬೇಕೆಂದು ಶಾಸಕ ನಿಖಿಲ ಕತ್ತಿ ಹೇಳಿದರು.</p>.<p>ಸಂಕೇಶ್ವರ ಸಮೀಪದ ಅಂಕಲಿಯಲ್ಲಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.</p>.<p>ಕೃಷಿ, ಪಶುಸಂಗೋಪಣೆ, ತೋಟಗಾರಿಕೆ, ರೇಷ್ಮೆ, ಕೃಷಿ ಮಾರುಕಟ್ಟೆ, ಸಹಕಾರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ. ಕೈಗಾರಿಕೆ ಇಲಾಖೆಗಳಲ್ಲಿ ಗ್ರಾಮೀಣ ಜನರಿಗೆ ಅನುಕೂಲವಾಗುವ ಅನೇಕ ಯೋಜನೆಗಳಿದ್ದು ಅವುಗಳ ಬಗೆಗೆ ಜನರಿಗೆ ಮಾಹಿತಿ ನೀಡಿ, ನಿಗದಿತ ಸಮಯದಲ್ಲಿ ಅರ್ಜಿಗಳನ್ನು ಹಾಕಿಸಬೇಕು ಎಂದು ಅವರು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಂಕಲಿ ಗ್ರಾಮದಲ್ಲಿ ಸೇತುವೇ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಕೊಳ್ಳಬೇಕೆಂದು ಅಂಕಲಿ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.</p>.<p>ಜನ ಸಂಪರ್ಕಸಭೆಯಲ್ಲಿ ತಹಶೀಲ್ದಾರ್ ಮಂಜುಳಾ ನಾಯಿಕ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ಪಾಟೀಲ, ಅಂಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆಜರೇಕರ, ಉಪಾಧ್ಯಕ್ಷೆ ಸುಜಾತಾ ಘಸ್ತಿ, ಸದಸ್ಯರಾದ ಗಂಗಾಧರ ಪಾಟೀಲ, ಏಕನಾಥ ಪವಾರ, ಭರತ ಪುಂಡೆ, ಪಿಡಿಒ ಕಲ್ಲಪ್ಪಾ ಕುರಣಿ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ</strong>: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಅನೇಕ ಜನೋಪಯೋಗಿ ಯೋಜನೆಗಳಿದ್ದು, ಅವುಗಳ ಕುರಿತು ಗ್ರಾಮೀಣ ಜನರಿಗೆ ತಿಳಿವಳಿಕೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಅಧಿಕಾರಿಗಳು ಮಾಡಬೇಕೆಂದು ಶಾಸಕ ನಿಖಿಲ ಕತ್ತಿ ಹೇಳಿದರು.</p>.<p>ಸಂಕೇಶ್ವರ ಸಮೀಪದ ಅಂಕಲಿಯಲ್ಲಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.</p>.<p>ಕೃಷಿ, ಪಶುಸಂಗೋಪಣೆ, ತೋಟಗಾರಿಕೆ, ರೇಷ್ಮೆ, ಕೃಷಿ ಮಾರುಕಟ್ಟೆ, ಸಹಕಾರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ. ಕೈಗಾರಿಕೆ ಇಲಾಖೆಗಳಲ್ಲಿ ಗ್ರಾಮೀಣ ಜನರಿಗೆ ಅನುಕೂಲವಾಗುವ ಅನೇಕ ಯೋಜನೆಗಳಿದ್ದು ಅವುಗಳ ಬಗೆಗೆ ಜನರಿಗೆ ಮಾಹಿತಿ ನೀಡಿ, ನಿಗದಿತ ಸಮಯದಲ್ಲಿ ಅರ್ಜಿಗಳನ್ನು ಹಾಕಿಸಬೇಕು ಎಂದು ಅವರು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಂಕಲಿ ಗ್ರಾಮದಲ್ಲಿ ಸೇತುವೇ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಕೊಳ್ಳಬೇಕೆಂದು ಅಂಕಲಿ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.</p>.<p>ಜನ ಸಂಪರ್ಕಸಭೆಯಲ್ಲಿ ತಹಶೀಲ್ದಾರ್ ಮಂಜುಳಾ ನಾಯಿಕ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ ಪಾಟೀಲ, ಅಂಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಆಜರೇಕರ, ಉಪಾಧ್ಯಕ್ಷೆ ಸುಜಾತಾ ಘಸ್ತಿ, ಸದಸ್ಯರಾದ ಗಂಗಾಧರ ಪಾಟೀಲ, ಏಕನಾಥ ಪವಾರ, ಭರತ ಪುಂಡೆ, ಪಿಡಿಒ ಕಲ್ಲಪ್ಪಾ ಕುರಣಿ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>