<p><strong>ನೇಸರಗಿ:</strong> ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ಡಿ.ವಿ.ಸ್ವಾಮಿ ನೇತೃತ್ವದ ಕೇಂದ್ರ ಜಲಶಕ್ತಿ ಅಭಿಯಾನ ತಂಡವು ಸಮೀಪದ ದೇಶನೂರ, ಹಣಬರಹಟ್ಟಿ ಗ್ರಾ.ಪಂಗೆ ಭೇಟಿ ನೀಡಿ ಜಲಶಕ್ತಿ ಅಭಿಯಾನ ಕಾರ್ಯಕ್ರಮಗಳನ್ನು ಬುಧವಾರ ವೀಕ್ಷಿಸಿತು.</p>.<p>ನರೇಗಾ ಯೋಜನೆಯಡಿಯಲ್ಲಿ ಜಲಶಕ್ತಿ ಅಭಿಯಾನದಡಿ ಕೈಗೊಂಡಿರುವ ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳನ್ನು ಕೇಂದ್ರೀಯ ಅಂತರ ಜಲ ಸಮೀತಿಯ ವಿಜ್ಞಾನಿ ಡಾ.ಸುಚೇತನಾ ಬೀಸ್ವಾಸ್, ತಂಡದವರು ಪರಿಶೀಲನೆ ಮಾಡಿದರು.</p>.<p>ಹಣಬರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಕೃಷಿ ಇಲಾಖೆಯ ಸಂಯೋಗದೊಂದಿಗೆ ನರೇಗಾ ಯೋಜನೆಯಡಿ ಕೈಗೊಂಡಿರುವ ನೀರುಗಾವಲಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನರೇಗಾ ಕೂಲಿಕಾರರೊಂದಿಗೆ ಯೋಜನೆಯ ಕುರಿತು ಸಂವಾದ ನಡೆಸಿದರು.</p>.<p> ಕಸವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಘಟಕದಲ್ಲಿ ಕೆಲಸದಲ್ಲಿ ನಿರತರಾಗಿರುವ ಸ್ವಸಹಾಯ ಸಂಘದ ಗುಂಪಿನ ಮಹಿಳಾ ಸದಸ್ಯರೊಂದಿಗೆ ಸಂವಾದ ನಡೆಸಿದರು.</p>.<p>ಬೆಳಗಾವಿ ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಸಂಪಗಾಂವಿ, ತಾ.ಪಂ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ರಘು ಬಿ.ಎನ್, ಸುರೇಶ ಬಗಲಿ, ಗ್ರಾಪಂ ಪಿಡಿಓ, ಕೀರಣ ಶಿಂದೆ, ಸುನೀಲ್ ಔವರನಾಳ, ಎಸ್.ವ್ಹಿ.ಹಿರೇಮಠ ತಾ.ಪಂ, ಅರಣ್ಯ ಇಲಾಖೆಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೇಸರಗಿ:</strong> ಕೇಂದ್ರ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ಡಿ.ವಿ.ಸ್ವಾಮಿ ನೇತೃತ್ವದ ಕೇಂದ್ರ ಜಲಶಕ್ತಿ ಅಭಿಯಾನ ತಂಡವು ಸಮೀಪದ ದೇಶನೂರ, ಹಣಬರಹಟ್ಟಿ ಗ್ರಾ.ಪಂಗೆ ಭೇಟಿ ನೀಡಿ ಜಲಶಕ್ತಿ ಅಭಿಯಾನ ಕಾರ್ಯಕ್ರಮಗಳನ್ನು ಬುಧವಾರ ವೀಕ್ಷಿಸಿತು.</p>.<p>ನರೇಗಾ ಯೋಜನೆಯಡಿಯಲ್ಲಿ ಜಲಶಕ್ತಿ ಅಭಿಯಾನದಡಿ ಕೈಗೊಂಡಿರುವ ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳನ್ನು ಕೇಂದ್ರೀಯ ಅಂತರ ಜಲ ಸಮೀತಿಯ ವಿಜ್ಞಾನಿ ಡಾ.ಸುಚೇತನಾ ಬೀಸ್ವಾಸ್, ತಂಡದವರು ಪರಿಶೀಲನೆ ಮಾಡಿದರು.</p>.<p>ಹಣಬರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಕೃಷಿ ಇಲಾಖೆಯ ಸಂಯೋಗದೊಂದಿಗೆ ನರೇಗಾ ಯೋಜನೆಯಡಿ ಕೈಗೊಂಡಿರುವ ನೀರುಗಾವಲಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನರೇಗಾ ಕೂಲಿಕಾರರೊಂದಿಗೆ ಯೋಜನೆಯ ಕುರಿತು ಸಂವಾದ ನಡೆಸಿದರು.</p>.<p> ಕಸವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಘಟಕದಲ್ಲಿ ಕೆಲಸದಲ್ಲಿ ನಿರತರಾಗಿರುವ ಸ್ವಸಹಾಯ ಸಂಘದ ಗುಂಪಿನ ಮಹಿಳಾ ಸದಸ್ಯರೊಂದಿಗೆ ಸಂವಾದ ನಡೆಸಿದರು.</p>.<p>ಬೆಳಗಾವಿ ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಸಂಪಗಾಂವಿ, ತಾ.ಪಂ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ರಘು ಬಿ.ಎನ್, ಸುರೇಶ ಬಗಲಿ, ಗ್ರಾಪಂ ಪಿಡಿಓ, ಕೀರಣ ಶಿಂದೆ, ಸುನೀಲ್ ಔವರನಾಳ, ಎಸ್.ವ್ಹಿ.ಹಿರೇಮಠ ತಾ.ಪಂ, ಅರಣ್ಯ ಇಲಾಖೆಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>