<p><strong>ಬೆಳಗಾವಿ:</strong> ‘ಉತ್ತರ ಕರ್ನಾಟದ ಸ್ವಾಭಿಮಾನದ ಪ್ರತೀಕವಾದ ಕಿತ್ತೂರು ಉತ್ಸವದಂದು ಇಲ್ಲಿನ ಸುವರ್ಣ ವಿಧಾನಸೌಧದ ಮುಂದೆ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಬೇಕು’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸರ್ಕಾರವು ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರು ನಾಮಕರಣ ಮಾಡಬೇಕು. ಕೇಂದ್ರ ಸರ್ಕಾರ ಅನುಮತಿ ನೀಡುವ ವಿಷಯದಲ್ಲಿ ವಿಳಂಬ ಮಾಡದೆ, ಕಿತ್ತೂರು ಉತ್ಸವಕ್ಕೂ ಮುನ್ನ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಬೇಕು. ಉತ್ಸವದ ಉದ್ಘಾಟನೆ ದಿನವೇ ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಈ ಕುರಿತು ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತಬೇಕು. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಉತ್ತರ ಕರ್ನಾಟದ ಸ್ವಾಭಿಮಾನದ ಪ್ರತೀಕವಾದ ಕಿತ್ತೂರು ಉತ್ಸವದಂದು ಇಲ್ಲಿನ ಸುವರ್ಣ ವಿಧಾನಸೌಧದ ಮುಂದೆ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಬೇಕು’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸರ್ಕಾರವು ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರು ನಾಮಕರಣ ಮಾಡಬೇಕು. ಕೇಂದ್ರ ಸರ್ಕಾರ ಅನುಮತಿ ನೀಡುವ ವಿಷಯದಲ್ಲಿ ವಿಳಂಬ ಮಾಡದೆ, ಕಿತ್ತೂರು ಉತ್ಸವಕ್ಕೂ ಮುನ್ನ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಬೇಕು. ಉತ್ಸವದ ಉದ್ಘಾಟನೆ ದಿನವೇ ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಈ ಕುರಿತು ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತಬೇಕು. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>