<p><strong>ಬೆಳಗಾವಿ</strong>: ಯಳ್ಳೂರಿನಿಂದ ರಾಜಹಂಸಘಡ ಕೋಟೆಯವರೆಗೆ ‘ಕೇಬಲ್ ಕಾರ್’ ಅಳವಡಿಸುವ ಯೋಜನೆಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನವದೆಹಯಲಿಯಲ್ಲಿ ಸೋಮವಾರ ಸಚಿವರನ್ನು ಭೇಟಿ ಮಾಡಿದ ಶಾಸಕ ಅಭಯ ಮಾಟೀಲ, ಈ ಮಹತ್ವಾಕಾಂಕ್ಷಿ ಯೋಜನೆಯ ಮನವರಿಕೆ ಮಾಡಿದರು.</p>.<p>ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಘಡ ಬೆಟ್ಟದವರೆಗಿನ ಕೇಬಲ್ ಕಾರ್ ಅಳವಡಿಸಲು ₹60 ಕೋಟಿಯ ಯೋಜನೆಗೆ ಮಂಜೂರಾತಿ ನೀಡುವಂತೆ ಶಾಸಕ ಅಭಯ ಮನವಿ ಮಾಡಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಕೇಂದ್ರ ಸಚಿವ ಪರಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಡಿಸೆಂಬರ್ ಒಳಗಾಗಿ ವರದಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಿ, ಜನವರಿ ತಿಂಗಳ ನಂತರ ಕೇಬಲ್ ಕಾರ್ ಯೋಜನೆಯ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.</p>.<p>ಬೆಳಗಾವಿಯನ್ನು ಪ್ರವಾಸಿ ಆಕರ್ಷಣೆಯ ಕೇಂದ್ರ ಮಾಡಲು, ಅಕ್ಕಪಕ್ಕದ ರಾಜ್ಯಗಳ ಪ್ರವಾಸಿಗರನ್ನೂ ಸೆಳೆಯಲು ಈ ‘ಕೇಬಲ್ ಕಾರ್’ ಯೋಜನೆಯ ಅನುಷ್ಠಾನ ಅಗತ್ಯವಾಗಿದೆ. ಕೇಂದ್ರದ ಅನುಮತಿ ಪಡೆಯುವಲ್ಲಿ ಯುಶಸ್ವಿಯಾಗಿದ್ದೇನೆ ಎಂದು ಶಾಸಕ ತಿಳಿಸಿದ್ದಾರೆ.</p>.<p>ಈ ಯೋಜನೆಯ ಅನುಷ್ಠಾನದಿಂದ ಬೆಳಗಾವಿಯ ಮಹಾನಗರದ ಜನ ಕೂಡ ಸಂಭ್ರಮಪಡಬಹುದು. ಯಳ್ಳೂರು ಗ್ರಾಮವು ಪಿಕ್ನಿಕ್ ತಾಣ ಆಗುವದರ ಜೊತೆಗೆ, ಪಕ್ಕದ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪ್ರವಾಸಿಗರನ್ನು ಬೆಳಗಾವಿಯತ್ತ ಸೆಳೆಯಬಹುದು. ಇದರಿಂದ ಬೆಳಗಾವಿಯ ಆರ್ಥಿಕ ವಹಿವಾಟು ಹೆಚ್ಚಳವಾಗಲಿದೆ ಎಂದು ಶಾಸಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಯಳ್ಳೂರಿನಿಂದ ರಾಜಹಂಸಘಡ ಕೋಟೆಯವರೆಗೆ ‘ಕೇಬಲ್ ಕಾರ್’ ಅಳವಡಿಸುವ ಯೋಜನೆಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನವದೆಹಯಲಿಯಲ್ಲಿ ಸೋಮವಾರ ಸಚಿವರನ್ನು ಭೇಟಿ ಮಾಡಿದ ಶಾಸಕ ಅಭಯ ಮಾಟೀಲ, ಈ ಮಹತ್ವಾಕಾಂಕ್ಷಿ ಯೋಜನೆಯ ಮನವರಿಕೆ ಮಾಡಿದರು.</p>.<p>ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಘಡ ಬೆಟ್ಟದವರೆಗಿನ ಕೇಬಲ್ ಕಾರ್ ಅಳವಡಿಸಲು ₹60 ಕೋಟಿಯ ಯೋಜನೆಗೆ ಮಂಜೂರಾತಿ ನೀಡುವಂತೆ ಶಾಸಕ ಅಭಯ ಮನವಿ ಮಾಡಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಕೇಂದ್ರ ಸಚಿವ ಪರಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.<p>ಡಿಸೆಂಬರ್ ಒಳಗಾಗಿ ವರದಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಿ, ಜನವರಿ ತಿಂಗಳ ನಂತರ ಕೇಬಲ್ ಕಾರ್ ಯೋಜನೆಯ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.</p>.<p>ಬೆಳಗಾವಿಯನ್ನು ಪ್ರವಾಸಿ ಆಕರ್ಷಣೆಯ ಕೇಂದ್ರ ಮಾಡಲು, ಅಕ್ಕಪಕ್ಕದ ರಾಜ್ಯಗಳ ಪ್ರವಾಸಿಗರನ್ನೂ ಸೆಳೆಯಲು ಈ ‘ಕೇಬಲ್ ಕಾರ್’ ಯೋಜನೆಯ ಅನುಷ್ಠಾನ ಅಗತ್ಯವಾಗಿದೆ. ಕೇಂದ್ರದ ಅನುಮತಿ ಪಡೆಯುವಲ್ಲಿ ಯುಶಸ್ವಿಯಾಗಿದ್ದೇನೆ ಎಂದು ಶಾಸಕ ತಿಳಿಸಿದ್ದಾರೆ.</p>.<p>ಈ ಯೋಜನೆಯ ಅನುಷ್ಠಾನದಿಂದ ಬೆಳಗಾವಿಯ ಮಹಾನಗರದ ಜನ ಕೂಡ ಸಂಭ್ರಮಪಡಬಹುದು. ಯಳ್ಳೂರು ಗ್ರಾಮವು ಪಿಕ್ನಿಕ್ ತಾಣ ಆಗುವದರ ಜೊತೆಗೆ, ಪಕ್ಕದ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪ್ರವಾಸಿಗರನ್ನು ಬೆಳಗಾವಿಯತ್ತ ಸೆಳೆಯಬಹುದು. ಇದರಿಂದ ಬೆಳಗಾವಿಯ ಆರ್ಥಿಕ ವಹಿವಾಟು ಹೆಚ್ಚಳವಾಗಲಿದೆ ಎಂದು ಶಾಸಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>