‘ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಜಲಾಶಯದಿಂದ ಕ್ರಸ್ಟ್ ಗೇಟ್ಗಳ ಮೂಲಕ ಘಟಪ್ರಭಾ ನದಿಗೆ ಯಾವ ಕ್ಷಣದಲ್ಲಾದರೂ ನೀರು ಬಿಡುಗಡೆ ಮಾಡಬಹುದಾಗಿದೆ. ಹೀಗಾಗಿ, ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಜನರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.