<p><strong>ಬೆಳಗಾವಿ:</strong> ಜಿಲ್ಲಾ ಪಂಚಾಯ್ತಿಯ ಯೋಜನಾ, ಹಣಕಾಸು ಹಾಗೂ ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷೆ ಆಶಾ ಐಹೊಳೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.</p>.<p>ಅನುಮತಿ ಇಲ್ಲದೇ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಮುಖ್ಯ ಲೆಕ್ಕಾಧಿಕಾರಿ ಪರುಶುರಾಮ ದುಡಗುಂಟಿ ಅವರಿಗೆ ಸೂಚಿಸಿದರು.</p>.<p>‘ಪ್ರಗತಿ ಪರಿಶೀಲನಾ ವರದಿ ಪುಸ್ತಕವನ್ನು ಸಭೆಯ ನೋಟಿಸ್ನಲ್ಲಿ ತಿಳಿಸಿರುವ ದಿನಾಂಕದೊಳಗೆ ಎಲ್ಲ ಸದಸ್ಯರಿಗೂ ಒಂದು ಪ್ರತಿಯನ್ನು ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಬೇಕು’ ಎಂದು ಸದಸ್ಯ ಗುರಪ್ಪ ಶಿವನಿಂಗ ದಾಶ್ಯಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಿಗದಿತ ಗುರಿ ತಲುಪುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು.</p>.<p>ಮೀನುಗಾರಿಕಾ ಇಲಾಖೆಯು ಕೆರೆಯ ಟೆಂಡರ್ ಕರೆದಿರುವ ಕುರಿತು ಮಾಹಿತಿ ಒದಗಿಸಬೇಕು. ತೆಲಸಂಗ ಗ್ರಾಮದ ತೋಟಗಾರಿಕೆ ರೈತ ಉತ್ಪಾದಕರ ಸಂಘ ಮುಚ್ಚಿ ಹೋಗಿದ್ದು, ಅದನ್ನು ಪುನಃ ಪ್ರಾರಂಭಿಸುವ ಕುರಿತು ಕ್ರಮ ವಹಿಸಲಬೇಕು ಎಂದು ನಿರ್ದೇಶನ ನೀಡಲಾಯಿತು.</p>.<p>ಸದಸ್ಯ ಜಿತೇಂದ್ರ ಟೋಪಣ್ಣ ಮಾದರ, ‘ತೋಟಗಾರಿಕಾ ಇಲಾಖೆಯಲ್ಲಿ ಮೀಸಲಿರಿಸಿರುವ ಅನುದಾನ ಮತ್ತು ಫಲಾನುಭವಿಗಳ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದರು.</p>.<p>‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಸಭೆಗೆ ಹಾಜರಾಗದಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅಧ್ಯಕ್ಷೆ ಸೂಚಿಸಿದರು.</p>.<p>ಸದಸ್ಯ ರಮೇಶ ದೇಶಪಾಂಡೆ ಮಾತನಾಡಿ, ‘ಹಿಂದಿನ ಸಾಲಿನಂತೆ ಪ್ರಸ್ತುತ ಸಾಲಿನ ಅನುದಾನ ವಾಪಸ್ ಹೋಗಿದಂತೆ ನೋಡಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಬಿಲ್ಲುಗಳನ್ನು ತಯಾರಿಸಿ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸದಸ್ಯ ಕೃಷ್ಣಪ್ಪ ಬಾಲಪ್ಪ ಲಮಾಣಿ, ಅನಿಲ ಪಾರೀಸಪ್ಪ ಮ್ಯಾಕಲಮರ್ಡಿ, ಶಿವಗಂಗಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲಾ ಪಂಚಾಯ್ತಿಯ ಯೋಜನಾ, ಹಣಕಾಸು ಹಾಗೂ ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷೆ ಆಶಾ ಐಹೊಳೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.</p>.<p>ಅನುಮತಿ ಇಲ್ಲದೇ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಮುಖ್ಯ ಲೆಕ್ಕಾಧಿಕಾರಿ ಪರುಶುರಾಮ ದುಡಗುಂಟಿ ಅವರಿಗೆ ಸೂಚಿಸಿದರು.</p>.<p>‘ಪ್ರಗತಿ ಪರಿಶೀಲನಾ ವರದಿ ಪುಸ್ತಕವನ್ನು ಸಭೆಯ ನೋಟಿಸ್ನಲ್ಲಿ ತಿಳಿಸಿರುವ ದಿನಾಂಕದೊಳಗೆ ಎಲ್ಲ ಸದಸ್ಯರಿಗೂ ಒಂದು ಪ್ರತಿಯನ್ನು ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಬೇಕು’ ಎಂದು ಸದಸ್ಯ ಗುರಪ್ಪ ಶಿವನಿಂಗ ದಾಶ್ಯಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಿಗದಿತ ಗುರಿ ತಲುಪುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು.</p>.<p>ಮೀನುಗಾರಿಕಾ ಇಲಾಖೆಯು ಕೆರೆಯ ಟೆಂಡರ್ ಕರೆದಿರುವ ಕುರಿತು ಮಾಹಿತಿ ಒದಗಿಸಬೇಕು. ತೆಲಸಂಗ ಗ್ರಾಮದ ತೋಟಗಾರಿಕೆ ರೈತ ಉತ್ಪಾದಕರ ಸಂಘ ಮುಚ್ಚಿ ಹೋಗಿದ್ದು, ಅದನ್ನು ಪುನಃ ಪ್ರಾರಂಭಿಸುವ ಕುರಿತು ಕ್ರಮ ವಹಿಸಲಬೇಕು ಎಂದು ನಿರ್ದೇಶನ ನೀಡಲಾಯಿತು.</p>.<p>ಸದಸ್ಯ ಜಿತೇಂದ್ರ ಟೋಪಣ್ಣ ಮಾದರ, ‘ತೋಟಗಾರಿಕಾ ಇಲಾಖೆಯಲ್ಲಿ ಮೀಸಲಿರಿಸಿರುವ ಅನುದಾನ ಮತ್ತು ಫಲಾನುಭವಿಗಳ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದರು.</p>.<p>‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಸಭೆಗೆ ಹಾಜರಾಗದಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅಧ್ಯಕ್ಷೆ ಸೂಚಿಸಿದರು.</p>.<p>ಸದಸ್ಯ ರಮೇಶ ದೇಶಪಾಂಡೆ ಮಾತನಾಡಿ, ‘ಹಿಂದಿನ ಸಾಲಿನಂತೆ ಪ್ರಸ್ತುತ ಸಾಲಿನ ಅನುದಾನ ವಾಪಸ್ ಹೋಗಿದಂತೆ ನೋಡಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಬಿಲ್ಲುಗಳನ್ನು ತಯಾರಿಸಿ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸದಸ್ಯ ಕೃಷ್ಣಪ್ಪ ಬಾಲಪ್ಪ ಲಮಾಣಿ, ಅನಿಲ ಪಾರೀಸಪ್ಪ ಮ್ಯಾಕಲಮರ್ಡಿ, ಶಿವಗಂಗಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>