ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಲೇಜು ಕಬಡ್ಡಿ ಟೂರ್ನಿ

Last Updated 2 ಮಾರ್ಚ್ 2020, 10:54 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಆರ್.ಪಿ.ಡಿ. ಕಾಲೇಜಿನಿಂದ ಸೋಮವಾರ ಆಯೋಜಿಸಿದ್ದ 2019-20ನೇ ಸಾಲಿನ ಆರ್‌ಸಿಯು ಅಂತರ ಕಾಲೇಜುಗಳ ವಲಯ ಮಟ್ಟದ ಕಬಡ್ಡಿ ಟೂರ್ನಿಯನ್ನು ಜಿಎಸ್‌ಎಸ್‌ ಕಾಲೇಜಿನ ಪ್ರಾಚಾರ್ಯ ಪ್ರೊ.ಎನ್.ಡಿ. ಹೆಗಡೆ ಉದ್ಘಾಟಿಸಿದರು.

‘ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ಸದೃಢ ಮನಸ್ಸು ಮತ್ತು ಶರೀರಕ್ಕಾಗಿ ಆಟೋಟಗಳಲ್ಲೂ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಆರ್.ಪಿ.ಡಿ. ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಡಾ.ಶೋಭಾ ನಾಯಕ ಮಾತನಾಡಿದರು. ಆರ್.ಎಲ್.ಎಸ್. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎನ್ ಪಾಟೀಲ, ಸಿ.ಬಿ. ನಾಯಕ,ದೈಹಿಕ ಶಿಕ್ಷಣ ನಿರ್ದೇಶಕ ಎನ್. ರಾಮಕೃಷ್ಣ ಇದ್ದರು.

ವೈಷ್ಣವಿ ಕಾಕತಿಕರ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರೊ.ಸಿ.ಎಂ. ಮುನ್ನೋಳಿ ಸ್ವಾಗತಿಸಿದರು. ಪ್ರೊ.ಎಸ್.ಎಸ್. ಶಿಂಧೆ ವಂದಿಸಿದರು. ದೇವಯಾನಿ ಶಹಪೂರಕರ ಮತ್ತು ಸಲೋನಿ ಪಾಟೀಲ ನಿರೂಪಿಸಿದರು.

ವಿವಿಧ ತಾಲ್ಲೂಕುಗಳ 18 ತಂಡಗಳು ಪಾಲ್ಗೊಂಡವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT