<p><strong>ಬೆಳಗಾವಿ</strong>: ಇಲ್ಲಿನ ಆರ್.ಪಿ.ಡಿ. ಕಾಲೇಜಿನಿಂದ ಸೋಮವಾರ ಆಯೋಜಿಸಿದ್ದ 2019-20ನೇ ಸಾಲಿನ ಆರ್ಸಿಯು ಅಂತರ ಕಾಲೇಜುಗಳ ವಲಯ ಮಟ್ಟದ ಕಬಡ್ಡಿ ಟೂರ್ನಿಯನ್ನು ಜಿಎಸ್ಎಸ್ ಕಾಲೇಜಿನ ಪ್ರಾಚಾರ್ಯ ಪ್ರೊ.ಎನ್.ಡಿ. ಹೆಗಡೆ ಉದ್ಘಾಟಿಸಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ಸದೃಢ ಮನಸ್ಸು ಮತ್ತು ಶರೀರಕ್ಕಾಗಿ ಆಟೋಟಗಳಲ್ಲೂ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಆರ್.ಪಿ.ಡಿ. ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಡಾ.ಶೋಭಾ ನಾಯಕ ಮಾತನಾಡಿದರು. ಆರ್.ಎಲ್.ಎಸ್. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎನ್ ಪಾಟೀಲ, ಸಿ.ಬಿ. ನಾಯಕ,ದೈಹಿಕ ಶಿಕ್ಷಣ ನಿರ್ದೇಶಕ ಎನ್. ರಾಮಕೃಷ್ಣ ಇದ್ದರು.</p>.<p>ವೈಷ್ಣವಿ ಕಾಕತಿಕರ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರೊ.ಸಿ.ಎಂ. ಮುನ್ನೋಳಿ ಸ್ವಾಗತಿಸಿದರು. ಪ್ರೊ.ಎಸ್.ಎಸ್. ಶಿಂಧೆ ವಂದಿಸಿದರು. ದೇವಯಾನಿ ಶಹಪೂರಕರ ಮತ್ತು ಸಲೋನಿ ಪಾಟೀಲ ನಿರೂಪಿಸಿದರು.</p>.<p>ವಿವಿಧ ತಾಲ್ಲೂಕುಗಳ 18 ತಂಡಗಳು ಪಾಲ್ಗೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಆರ್.ಪಿ.ಡಿ. ಕಾಲೇಜಿನಿಂದ ಸೋಮವಾರ ಆಯೋಜಿಸಿದ್ದ 2019-20ನೇ ಸಾಲಿನ ಆರ್ಸಿಯು ಅಂತರ ಕಾಲೇಜುಗಳ ವಲಯ ಮಟ್ಟದ ಕಬಡ್ಡಿ ಟೂರ್ನಿಯನ್ನು ಜಿಎಸ್ಎಸ್ ಕಾಲೇಜಿನ ಪ್ರಾಚಾರ್ಯ ಪ್ರೊ.ಎನ್.ಡಿ. ಹೆಗಡೆ ಉದ್ಘಾಟಿಸಿದರು.</p>.<p>‘ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ಸದೃಢ ಮನಸ್ಸು ಮತ್ತು ಶರೀರಕ್ಕಾಗಿ ಆಟೋಟಗಳಲ್ಲೂ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಆರ್.ಪಿ.ಡಿ. ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಡಾ.ಶೋಭಾ ನಾಯಕ ಮಾತನಾಡಿದರು. ಆರ್.ಎಲ್.ಎಸ್. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎನ್ ಪಾಟೀಲ, ಸಿ.ಬಿ. ನಾಯಕ,ದೈಹಿಕ ಶಿಕ್ಷಣ ನಿರ್ದೇಶಕ ಎನ್. ರಾಮಕೃಷ್ಣ ಇದ್ದರು.</p>.<p>ವೈಷ್ಣವಿ ಕಾಕತಿಕರ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರೊ.ಸಿ.ಎಂ. ಮುನ್ನೋಳಿ ಸ್ವಾಗತಿಸಿದರು. ಪ್ರೊ.ಎಸ್.ಎಸ್. ಶಿಂಧೆ ವಂದಿಸಿದರು. ದೇವಯಾನಿ ಶಹಪೂರಕರ ಮತ್ತು ಸಲೋನಿ ಪಾಟೀಲ ನಿರೂಪಿಸಿದರು.</p>.<p>ವಿವಿಧ ತಾಲ್ಲೂಕುಗಳ 18 ತಂಡಗಳು ಪಾಲ್ಗೊಂಡವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>