‘ಸೊಸೈಟಿಗಳಿಗೆ ಸಂಬಂಧಿಸಿದ ನಿವೇಶನ, ಖಾಲಿ ಜಾಗ, ಜಮೀನು, ಕಟ್ಟಡ ಮೊದಲಾದ ಆಸ್ತಿಗಳನ್ನು ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆ.17ರವರೆಗೂ ಇಲ್ಲಿಯೇ ಇದ್ದು ಪ್ರಕ್ರಿಯೆ ನಡೆಸಲಿದ್ದಾರೆ. ಠೇವಣಿದಾರರಿಗೆ ಹಣ ಮರಳಿಸಲು ಎಲ್ಲ ಪ್ರಯತ್ನವನ್ನೂ ಈ ಮೂಲಕ ಮಾಡಲಾಗುತ್ತಿದೆ’ ಎಂದು ಉಪ ವಿಭಾಗಾಧಿಕಾರಿ ಅಶೋಕ ತೇಲಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.