<p><strong>ಬೆಳಗಾವಿ: </strong>ಠೇವಣಿದಾರರ ಕೋಟ್ಯಂತರ ರೂಪಾಯಿ ಮರುಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅಧ್ಯಕ್ಷರಾಗಿರುವ ಸಂಗೊಳ್ಳಿರಾಯಣ್ಣ ಹಾಗೂ ಭೀಮಾಂಬಿಕಾ ಸಹಕಾರಿ ಸೊಸೈಟಿಯ ವಿರುದ್ಧದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತೀವ್ರಗೊಳಿದ್ದಾರೆ.</p>.<p>ಕೆಲವು ದಿನಗಳಿಂದ ಇಲ್ಲಿ ಮೊಕ್ಕಂ ಹೂಡಿರುವ ಮೂವರು ಅಧಿಕಾರಿಗಳ ತಂಡ, ಈ ಸೊಸೈಟಿಗಳಿಗೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದೆ. ಸಹಾಯಕ್ಕೆಂದು ಇಲ್ಲಿನ ಕಂದಾಯ ಇಲಾಖೆಯ ಇಬ್ಬರು ಹಾಗೂ ಪೊಲೀಸ್ ಇಲಾಖೆಯ ಒಬ್ಬರನ್ನು ನಿಯೋಜಿಸಲಾಗಿದೆ.</p>.<p>‘ಪ್ರಕರಣದಲ್ಲಿ, ಈವರೆಗೆ 110 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇವುಗಳಲ್ಲಿ ಬಹುತೇಕ ಆಸ್ತಿಗಳು ಜಿಲ್ಲೆಯೊಂದರಲ್ಲೇ ಇವೆ’ ಎಂದು ತಿಳಿದುಬಂದಿದೆ.</p>.<p>‘ಸೊಸೈಟಿಗಳಿಗೆ ಸಂಬಂಧಿಸಿದ ನಿವೇಶನ, ಖಾಲಿ ಜಾಗ, ಜಮೀನು, ಕಟ್ಟಡ ಮೊದಲಾದ ಆಸ್ತಿಗಳನ್ನು ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆ.17ರವರೆಗೂ ಇಲ್ಲಿಯೇ ಇದ್ದು ಪ್ರಕ್ರಿಯೆ ನಡೆಸಲಿದ್ದಾರೆ. ಠೇವಣಿದಾರರಿಗೆ ಹಣ ಮರಳಿಸಲು ಎಲ್ಲ ಪ್ರಯತ್ನವನ್ನೂ ಈ ಮೂಲಕ ಮಾಡಲಾಗುತ್ತಿದೆ’ ಎಂದು ಉಪ ವಿಭಾಗಾಧಿಕಾರಿ ಅಶೋಕ ತೇಲಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಠೇವಣಿದಾರರ ಕೋಟ್ಯಂತರ ರೂಪಾಯಿ ಮರುಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅಧ್ಯಕ್ಷರಾಗಿರುವ ಸಂಗೊಳ್ಳಿರಾಯಣ್ಣ ಹಾಗೂ ಭೀಮಾಂಬಿಕಾ ಸಹಕಾರಿ ಸೊಸೈಟಿಯ ವಿರುದ್ಧದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತೀವ್ರಗೊಳಿದ್ದಾರೆ.</p>.<p>ಕೆಲವು ದಿನಗಳಿಂದ ಇಲ್ಲಿ ಮೊಕ್ಕಂ ಹೂಡಿರುವ ಮೂವರು ಅಧಿಕಾರಿಗಳ ತಂಡ, ಈ ಸೊಸೈಟಿಗಳಿಗೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದೆ. ಸಹಾಯಕ್ಕೆಂದು ಇಲ್ಲಿನ ಕಂದಾಯ ಇಲಾಖೆಯ ಇಬ್ಬರು ಹಾಗೂ ಪೊಲೀಸ್ ಇಲಾಖೆಯ ಒಬ್ಬರನ್ನು ನಿಯೋಜಿಸಲಾಗಿದೆ.</p>.<p>‘ಪ್ರಕರಣದಲ್ಲಿ, ಈವರೆಗೆ 110 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇವುಗಳಲ್ಲಿ ಬಹುತೇಕ ಆಸ್ತಿಗಳು ಜಿಲ್ಲೆಯೊಂದರಲ್ಲೇ ಇವೆ’ ಎಂದು ತಿಳಿದುಬಂದಿದೆ.</p>.<p>‘ಸೊಸೈಟಿಗಳಿಗೆ ಸಂಬಂಧಿಸಿದ ನಿವೇಶನ, ಖಾಲಿ ಜಾಗ, ಜಮೀನು, ಕಟ್ಟಡ ಮೊದಲಾದ ಆಸ್ತಿಗಳನ್ನು ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆ.17ರವರೆಗೂ ಇಲ್ಲಿಯೇ ಇದ್ದು ಪ್ರಕ್ರಿಯೆ ನಡೆಸಲಿದ್ದಾರೆ. ಠೇವಣಿದಾರರಿಗೆ ಹಣ ಮರಳಿಸಲು ಎಲ್ಲ ಪ್ರಯತ್ನವನ್ನೂ ಈ ಮೂಲಕ ಮಾಡಲಾಗುತ್ತಿದೆ’ ಎಂದು ಉಪ ವಿಭಾಗಾಧಿಕಾರಿ ಅಶೋಕ ತೇಲಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>