ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್ ಬಳಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಆರೋಪದ ಮೇಲೆ ಖಾನಾಪುರದ ಸಲ್ಮಾನ ನಿಯಾಜ ಬಡೆಗಾರ ಎಂಬಾತನನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತನಿಂದ ₹ 19,600 ನಗದು, 1 ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ಬೆಟ್ಟಿಂಗ್ ಬುಕ್ಕಿ, ಮಜಗಾವಿಯ ಪವನ ಕಾಕತಕರ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಆರೋಪಿಯು ಬೆಟ್ಟಿಂಗ್ನಲ್ಲಿ ತೊಡಗಿದ್ದ ಎಂದು ಹೇಳಲಾಗುತ್ತಿದೆ. ಎಸಿಪಿ (ಅಪರಾಧ) ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಉದ್ಯಮಬಾಗ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಸಿ ಪಾಟೀಲ ಹಾಗೂ ಸಿಬ್ಬಂದಿ ಅನಿಲ ಪಾಟೀಲ, ಐ.ಎಸ್ ಪಾಟೀಲ, ಶಿವಲಿಂಗ ಪಾಟೀಲ ಅವರನ್ನೊಳಗೊಂಡ ತಂಡ ದಾಳಿ ಮಾಡಿತ್ತು.